VIDEO: ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ಕಾರ್ಣಿಕೋತ್ಸವದಲ್ಲಿ ‘ಯುವ ಸಿಎಂ’ ಕುರಿತು ಭವಿಷ್ಯವಾಣಿ…

ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಕಾರ್ಣಿಕೋತ್ಸವ ರಾಜ್ಯದಲ್ಲಿಯೇ ವಿಶೇಷ ಸ್ಥಾನವನ್ನು ಪಡೆದಿದೆ. ದೇವರಗುಡ್ಡದ ಕಾರ್ಣಿಕ ನುಡಿಯುವ ಗೊರವಪ್ಪ ನಾಗಪ್ಪ ಉರ್ಮಿ 20 ಅಡಿ ಬಿಲ್ಲನ್ನೇರಿ ಪ್ರತಿವರ್ಷವೂ ಕಾರ್ಣಿಕ (ಭವಿಷ್ಯ) ನುಡಿಯುತ್ತಾರೆ. ಅದು ಸತ್ಯವಾಗುತ್ತದೆ ಎಂದೇ ಜನರು ನಂಬಿದ್ದಾರೆ. ದಸರಾ ಹಬ್ಬದ ಸಮಯದಲ್ಲಿ ಈ ಮಾಲತೇಶ ದೇವರ ಕಾರ್ಣಿಕೋತ್ಸವ ನಡೆಯುತ್ತದೆ. ಈ ವರ್ಷ ಅವರು ನುಡಿದ ಕಾರ್ಣಿಕ ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಎನ್ನುವುದು. ಇಷ್ಟು ಹೇಳುತ್ತಲೇ ಬಿಲ್ಲಿನಿಂದ ಧುಮುಕಿದ ಗೊರವಪ್ಪನನ್ನ ಭಕ್ತರು ಕೆಳಗೆ … Continue reading VIDEO: ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ಕಾರ್ಣಿಕೋತ್ಸವದಲ್ಲಿ ‘ಯುವ ಸಿಎಂ’ ಕುರಿತು ಭವಿಷ್ಯವಾಣಿ…