ಶಿರಸಿ (ಉತ್ತರ ಕನ್ನಡ): ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಮೂವರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪೊಲೀಸರು ಬಂಧಿಸಿದ್ದಾರೆ.
ಅಜಿತ್ ಶ್ರೀಕಾಂತ ನಾಡಿಗ್ (25), ಧನುಷ್ಯ ದಿಲೀಪ್ ಕುಮಾರ ಶೆಟ್ಟಿ ಶಿರಸಿ (25) ಹಾಗೂ ಪದ್ಮಜಾ ಡಿ.ಎನ್. ಶಿವಮೊಗ್ಗ (50) ಬಂಧಿತರು.
ಕಾಯಂ ಉಪನ್ಯಾಸಕ ಹುದ್ದೆ ಕೊಡಿಸೋದಾಗಿ ಯುವಕನ್ನು ಶಿವಮೊಗ್ಗಕ್ಕೆ ಕರೆಸಿಕೊಂಡಿದ್ದ ಇವರು, ಕೋಣೆಯೊಂದರಲ್ಲಿ ನಗ್ನಗೊಳಿಸಿ ಮಹಿಳೆಯ ಜೊತೆ ಲೈಂಗಿಕ ಕ್ರಿಯೆ ನಡೆಸುವ ವಿಡಿಯೋ ಚಿತ್ರಿಕರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು.
ನಂತರ ವಿಡಿಯೋ ತೋರಿಸಿ 15 ಲಕ್ಷ ನೀಡುವಂತೆ ಒತ್ತಾಯಿಸಿದ್ದರು. ಹಣ ನೀಡದಿದ್ದರೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು.
ಶಿರಸಿ ಡಿ.ಎಸ್.ಪಿ. ರವಿ ನಾಯ್ಕ ಮಾರ್ಗದರ್ಶನದಲ್ಲಿ ಸಿ.ಪಿ.ಐ. ರಾಮಚಂದ್ರ ನಾಯಕ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ನಡೆದಿದೆ.
ರಾಜ್ಯದಲ್ಲಿ ದಿಢೀರ್ ಸದ್ದು ಮಾಡುತ್ತಿದೆ ಹಿಜಾಬ್ ಧಾರಣೆ: ಒಬ್ಬರ ಮೇಲೊಬ್ಬರು ಹೈಕೋರ್ಟ್ಗೆ ಅರ್ಜಿ
ಪುನಃ ಸಿಡಿ ಸಂಕಷ್ಟದಲ್ಲಿ ಜಾರಕಿಹೊಳಿ! ವರದಿ ಸಲ್ಲಿಕೆಗೆ ಕೋರ್ಟ್ ಅನುಮತಿ, ಶೀಘ್ರದಲ್ಲೇ ‘ಭವಿಷ್ಯ’ ನಿರ್ಧಾರ