More

    ಕಾರಿನ ಹೊರಗೆ ಮದುವೆಯ ಮೆರುಗು- ಒಳಗಡೆ ಹಸುಗಳ ಒದ್ದಾಟ! ಉಡುಪಿಯಲ್ಲಿ ಅಮಾನವೀಯ ಘಟನೆ

    ಉಡುಪಿ: ಮದುವೆ ಮನೆಗೆ ಹೊರಟಿರುವಂತೆ ಕಾರಿನ ಹೊರಗಡೆ ಸಿಂಗಾರ ಮಾಡಿ, ಒಳಗಡೆ ಹಸುಗಳ ಕಳ್ಳಸಾಗಾಣಿಕೆ ಮಾಡುತ್ತಿದ್ದ ಭಯಾನಕ ಕೃತ್ಯವೊಂದು ಉಡುಪಿಯಲ್ಲಿ ನಡೆದಿದ್ದು, ಖದೀಮರು ಸಿಕ್ಕಿಬಿದ್ದಿದ್ದಾರೆ. ಗೋವುಗಳನ್ನು ಸಾಗಾಟ ಮಾಡಲು ಖದೀಮರು ಕಂಡುಕೊಂಡಿರುವ ಹೊಸ ಮಾರ್ಗ ಎಲ್ಲರನ್ನೂ ದಂಗುಬಡಿಸಿದೆ.

    ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದಲ್ಲಿ ಈ ಘಟನೆ ನಡೆದಿದೆ. ಇನ್ನೋವಾ ಕಾರನ್ನು ಮದುವೆ ಕಾರಿನಂತೆ ಸಿಂಗರಿಸಿಕೊಂಡು ಯಾರಿಗೂ ಅನುಮಾನ ಬಾರದಂತೆ ಮಾಡಲಾಗಿದೆ. ಅದರಲ್ಲಿ ಕಳವು ಮಾಡಿದ್ದ ಹಸುಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿತ್ತು. ಆದರೆ ಈ ವಿಷಯ ಹಿಂದೂ ಜಾಗರಣ ವೇದಿಕೆಯ ಕಿವಿಗೆ ಮುಟ್ಟಿ ಅವರು ಈ ಕಾರನ್ನು ತಡೆಹಿಡಿದು ಅದರಲ್ಲಿದ್ದ 15 ಕರಗಳನ್ನು ರಕ್ಷಿಸಿದ್ದಾರೆ.

    ಉಡುಪಿ ಸೇರಿದಂತೆ ಕರಾವಳಿ ಭಾಗಗಳಲ್ಲಿ ಹಸುಗಳನ್ನು ಕದ್ದು ಅವುಗಳನ್ನು ಸಾಗಾಟ ಮಾಡುತ್ತಿರುವ ಘಟನೆ ಎಗ್ಗಿಲ್ಲದೇ ನಡೆಯುತ್ತಿದೆ. ಆಗೀಗ ದಾಳಿ ನಡೆಯುತ್ತಿದ್ದರೂ ಈ ಅವ್ಯವಹಾರವಂತೂ ನಿಂತಿಲ್ಲ. ಕೆಲ ಘಟನೆಗಳಲ್ಲಿ ಕೇಸ್‌ ದಾಖಲಾಗಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಖದೀಮರು ಈ ರೀತಿ ಹೊಸ ಹೊಸ ವಿಧಾನಗಳನ್ನು ಕಂಡುಕೊಂಡು ಗೋವುಗಳನ್ನು ಸಾಗಿಸುವ ಕಾರ್ಯ ಮಾಡುತ್ತಲೇ ಇದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಎರಡು ವಾಹನಗಳಲ್ಲಿ 16 ಗೋವುಗಳು ಇದ್ದವು. ಅವುಗಳ ಕೈಕಾಲು ಕಟ್ಟಿಹಾಕಲಾಗಿತ್ತು. ಕುತ್ತಿಗೆಯನ್ನು ಬಿಗಿದಿದ್ದ ಕಾರಣ ಉಸಿರುಗಟ್ಟಿ ಎರಡು ಹಸುಗಳು ಮೃತಪಟ್ಟಿವೆ. ಇದರಿಂದ ಆಕ್ರೋಶಗೊಂಡ ಹಿಂದು ಜಾಗರಣ ವೇದಿಕೆ ಸದಸ್ಯರು ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ಬಂದಿದ್ದರಿಂದ ಖದೀಮರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್‌)

    ಲಿಂಗ ಸಾಬೀತುಪಡಿಸಿ ಎಂದು ಬಟ್ಟೆಬಿಚ್ಚಿಸಿ, ಒಳ ಉಡುಪು ಇಟ್ಟುಕೊಂಡು ವಿಕೃತಿ ಮೆರೆದ ಪೊಲೀಸರು!

    ಗುಜರಾತ್‌ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಾಯಲ್ಲಿ ಕನ್ನಡ- ಕಕ್ಷಿದಾರ ಕಕ್ಕಾಬಿಕ್ಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts