More

    ಉಗ್ರರ ದಾಳಿಗೆ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮ: ಮೂವರಿಗೆ ಗಾಯ

    ಶ್ರೀನಗರ: ಇಲ್ಲಿನ ನೌಗಾಮ್ ಪ್ರದೇಶದಲ್ಲಿ ಉಗ್ರರು ಇಂದು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಸಿಆರ್​ಪಿಎಫ್​ ಯೋಧರು ಬಲಿಯಾಗಿದ್ದಾರೆ.

    ನೌಗಾಮ್ ಪ್ರದೇಶದ ಕಂಡಿಜಾಲ್ ಸೇತುವೆ ಬಳಿ ಇಂದು ಮಧ್ಯಾಹ್ನ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಅವರ ನಡುವಿನ ಹೋರಾಟದಲ್ಲಿ ಇಬ್ಬರು ಹುತಾತ್ಮರಾಗಿರುವುದಾಗಿ ಸೇನೆ ತಿಳಿಸಿದೆ. ಗುಂಡಿನ ದಾಳಿಯಲ್ಲಿ ಈ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದವು. ಆದರೆ ನಂತರ ಅವರು ಹುತಾತ್ಮರಾಗಿದ್ದಾರೆ.

    ಈ ಘರ್ಷಣೆಯಲ್ಲಿ ಮೂವರು ಭಾರತೀಯ ಯೋಧರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಇಲ್ಲಿನ ಸೇನೆಯ 92 ಬೇಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂದಿನ ಮಾಹಿತಿ ತಿಳಿದುಬರಬೇಕಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

    ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿ ‘ಯುದ್ಧ’: ಆಯುಧವಾಯಿತು ‘ಗ್ರೀನ್​ ದೆಹಲಿ ಆ್ಯಪ್’!

    110ನೇ ಬೆಟ್ಯಾಲಿಯನ್​ ಸಿಬ್ಬಂದಿ ಸಲಕರಣೆಗಳನ್ನು ಒಯ್ಯುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಐವರು ಯೋಧರಿಗೆ ಗಂಭೀರ ಗಾಯಗಳಾಗಿದ್ದವು. ಅ ಪೈಕಿ ಇಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಏಕಾಏಕಿ ನಡೆದ ಈ ಗುಂಡಿನ ದಾಳಿಯ ನಂತರ ಜಮ್ಮು-ಕಾಶ್ಮೀರದ ನೌಗಾಮ್​ ಪ್ರದೇಶವನ್ನು ಸಂಪೂರ್ಣವಾಗಿ ಬಂದ್​ ಮಾಡಲಾಗಿದೆ.

    ಚುನಾವಣಾಧಿಕಾರಿಯಾಗಿ ತೃತೀಯ ಲಿಂಗಿ: ಇತಿಹಾಸ ಸೃಷ್ಟಿಸಿದ ಬಿಹಾರ

    ಮದ್ಯದ ದೊರೆಯ ವಿರುದ್ಧ ಲಂಡನ್​ನಲ್ಲಿ ನಡೀತಿದೆ ರಹಸ್ಯ ಕಾರ್ಯಾಚರಣೆ: ಸುಪ್ರೀಂಗೆ ಕೇಂದ್ರದ ಮಾಹಿತಿ

    ಪಕದ್ಮನೆ ಯುವಕನ ಜತೆ ಮದ್ವೆಯಾದ ಪತ್ನಿ: ನೊಂದ ಪತಿಯಿಂದ ಲೈವ್​ ಸ್ಯೂಸೈಡ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts