ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿರುವ ದಿನ ಕೊನೆಗೂ ಬಂದಿದೆ. ಮಾರ್ಚ್ 17ರ ಹುಟ್ಟುಹಬ್ಬದಂದು ಪುನೀತ್ ಅವರ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಷೋ ನಡೆಯಲಿದ್ದು, ಇದಕ್ಕಾಗಿ ಅಪ್ಪು ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ.
ಆದರೆ ಇದರ ನಡುವೆಯೇ, ಪುನೀತ್ ಅಭಿಮಾನಿಗಳಿಗೆ ಭಾರಿ ನಿರಾಸೆಯೆನ್ನುವ ಸುದ್ದಿಯೊಂದು ಹೊರಬಂದಿದೆ. ಅದೇನೆಂದರೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪಿನ ನಂತರವೂ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ ಗಲಾಟೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಇದರಿಂದಾಗಿ ಪುನೀತ್ ಅಭಿಮಾನಿಗಳ ಸಂಭ್ರಮಾಚರಣೆಗೆ ತಣ್ಣೀರು ಎರೆಚಲಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವೀರೇಶ್ ಚಿತ್ರಮಂದಿರದಲ್ಲಿ ಪುನೀತ್ ಅವರು 31 ಕಟ್ ಔಟ್ಗಳನ್ನು ನಿಲ್ಲಿಸಲಾಗಿದ್ದು, ಅವುಗಳ ಮೇಲೆ ಹೆಲಿಕಾಪ್ಟರ್ನಿಂದ ಪುಷ್ಪಾರ್ಚನೆ ಮಾಡಲು ಅಭಿಮಾನಿಗಳು ಕಾತರರಾಗಿದ್ದರು. ಇದಕ್ಕೆ ಸಕಲ ಸಿದ್ಧತೆಗಳೂ ನಡೆದಿದ್ದವು. ಆದರೆ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಯಕ್ರಮಕ್ಕೆ ಅನುಮತಿಯನ್ನು ನೀಡಲಿಲ್ಲ. ಇದರ ಜತೆಗೆ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕೆಲವೆಡೆ ಸಂಭ್ರಮಾಚರಣೆಗೂ ಪೊಲೀಸರು ಅನುಮತಿ ಕೊಡಲಿಲ್ಲ ಎಂದು ತಿಳಿದುಬಂದಿದೆ.
ಇದಿಷ್ಟೇ ಅಲ್ಲದೇ, ಬೆಳಗಿನ 5 ಗಂಟೆಗೆ ಪುನೀತ್ ಅವರ ನೆನಪಲ್ಲಿ ಅಭಿಮಾನಿಗಳು ಬಿರಿಯಾನಿ ಊಟ ಹಮ್ಮಿಕೊಂಡಿದ್ದರು. ಇದನ್ನು ಮಧ್ಯಾಹ್ನಕ್ಕೆ ಶಿಫ್ಟ್ ಮಾಡಲಾಗಿದೆ.
ಮದ್ವೆಯಾಗೋದಾಗಿ ಹೇಳಿ ರೇಪ್: ದುಬಾರಿ ಗಿಫ್ಟ್ ಪಡೆದು ಸ್ಯಾಂಡಲ್ವುಡ್ ನಟಿಯ ಅಣ್ಣ ಎಸ್ಕೇಪ್?