ಬೆಳಗಾವಿ: ಚಲನಚಿತ್ರ ಗೀತ ಸಾಹಿತಿ ಕೆ.ಕಲ್ಯಾಣ್ ಅವರ ಪತ್ನಿ ಅಪಹರಣ ಮತ್ತು ವಂಚನೆ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಾನಂದ ವಾಲಿಯಿಂದ ಆರು ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿಕೊಳ್ಳಲಾಗಿದೆ.
ಈ ಕುರಿತು ಡಿಸಿಪಿ ಡಾ.ವಿಕ್ರಮ ಅಮಟೆ ಈ ವಿಷಯ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಕಲ್ಯಾಣ ಪತ್ನಿ,ಅತ್ತೆ, ಮಾವ ಅವರನ್ನು ಮೂಢನಂಬಿಕೆ ಹೆಸರಿನಲ್ಲಿ ಹೆದರಿಸಿ ಹಣವನ್ನು ಲಪಟಾಯಿಸಿದರು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೆ.ಕಲ್ಯಾಣ್ರ ಮನೆ ಹಾಳು ಮಾಡಿದ ಮನೆಕೆಲಸದವಳು; ಗಂಗಾ, ಶಿವಾನಂದ್ ಹಿಸ್ಟರಿಯೇ ಭಯಾನಕ
ಕಲ್ಯಾಣ್ ಅವರು ನೀಡಿರುವ ದೂರಿನ ಆಧಾರದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮನೆ, ನಿವೇಶನ ಹಾಗೂ 10 ಮ್ಯಾಕ್ಸಿ ಕ್ಯಾಬ್, 350ಗ್ರಾಂ ಚಿನ್ನ, 6 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು ಆರು ಕೋಟಿ ರೂ.ಮೌಲ್ಯದ ಆಸ್ತಿ ವಶ ಪಡಿಸಿಕೊಳ್ಳಲಾಗಿದೆ ಎಂದರು.
ಈ ಕೇಸಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದರು.
ಪ್ರಿಯ ಸೋನಿಯಾಜಿ… ಕೆಲಸ ಮಾಡುವವರಿಗೆ ಬೆಲೆಯೇ ಇಲ್ಲದೆಡೆ ನಾನಿರಲಾರೆ- ‘ಕೈ’ಗೆ ಖುಷ್ಬೂ ಬೈಬೈ!