ಬೆಂಗಳೂರು: ಪಟಾಕಿಯ ಕುರಿತಂತೆ ಐಪಿಎಸ್ ಅಧಿಕಾರಿ ಡಿ. ರೂಪಾ ಟ್ವಿಟರ್ನಲ್ಲಿ ಮಾಡಿರುವ ಪೋಸ್ಟ್ ಒಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೀಗ ನಟಿ ಕಂಗನಾ ರಣಾವತ್ ಎಂಟ್ರಿ ನೀಡುವ ಮೂಲಕ ಪಟಾಕಿಯ ಕಿಡಿ ಹೊತ್ತಿ ಉರಿಯತೊಡಗಿದೆ!
ಪಟಾಕಿ ಬ್ಯಾನ್ ಮಾಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಅದನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಡಿ. ರೂಪಾ ಪೋಸ್ಟ್ ಮಾಡಿದ್ದರು. ನವೆಂಬರ್ 14ರಂದು ಹಾಕಿದ್ದ ಈ ಪೋಸ್ಟ್ನಲ್ಲಿ ಅವರು, ‘ಪಟಾಕಿ ಸಿಡಿಸುವುದು ಹಿಂದೂ ಸಂಸ್ಕೃತಿಯೊಂದಿಗೆ ಮೊದಲಿನಿಂದಲೂ ಬಂದದ್ದೇನಲ್ಲ. ಮಹಾಕಾವ್ಯಗಳು, ಪುರಾಣಗಳಲ್ಲಿಯೂ ಪಟಾಕಿಯ ಕುರಿತಂತೆ ಯಾವುದೇ ಉಲ್ಲೇಖವಿಲ್ಲ. ಪಟಾಕಿ ಭಾರತಕ್ಕೆ ಕಾಲಿಟ್ಟಿದ್ದು ಯುರೋಪಿಯನ್ನರ ಜತೆ’ ಎಂದು ಬರೆದುಕೊಂಡಿದ್ದರು.
And bcoz u have no respect for laws,rules of Govt,Court decisions &quasi judicial bodies &engage in continuous trolling with ur followers,misleading people with false knowledge, it will be wrong if I engage with trollers like u. Hence I'm blocking u .@TIinExile .@theskindoctor13 https://t.co/LLjucRtOUB
— D Roopa IPS (@D_Roopa_IPS) November 17, 2020
ಈ ಪೋಸ್ಟ್ಗೆ ಇದಾಗಲೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪರ–ವಿರೋಧ ಚರ್ಚೆ ನಡೆಯುತ್ತಿವೆ. ಪುರಾಣಗಳಲ್ಲಿಯೂ ಪಟಾಕಿಯ ಪ್ರಸ್ತಾಪವಿದೆ ಎಂದು ಸಾಬೀತು ಮಾಡುವುದಾಗಿ ಕೆಲವರು ಹೇಳಿಕೊಂಡಿದ್ದು, ಇದರ ಬಗ್ಗೆ ದೀಪಾವಳಿ ಮುಗಿದರೂ ಚರ್ಚೆ ನಿಂತಿಲ್ಲ.
ಇದೀಗ ನಟಿ ಕಂಗನಾ ರನೌತ್ ಬುಧವಾರ ರೂಪಾ ಅವರ ಹೇಳಿಕೆಗಳನ್ನು ಟೀಕಿಸಿ ಸರಣಿ ಟ್ವೀಟ್ ಮಾಡುವ ಮೂಲಕ ಚರ್ಚೆಗೆ ಇನ್ನಷ್ಟು ಆಸ್ಪದ ಕೊಟ್ಟಿದ್ದಾರೆ.
Government appoints people like @D_Roopa_IPS to protect fundamental rights of commoners, but look at her obnoxious ignorance like a sore looser she became so vengeful that if she couldn’t win the arguments with facts she simply got @TIinExile eliminated.Shame on you @D_Roopa_IPS https://t.co/6MP0lXxX9w
— Kangana Ranaut (@KanganaTeam) November 18, 2020
Side effects of reservations, when unworthy and undeserving gets the power they don’t heal they only hurt, I don’t know anything about her personal life but I guarantee that her frustration is stemming out of her incompetence #BringBackTrueIndology https://t.co/BUrVm1Fjz3
— Kangana Ranaut (@KanganaTeam) November 18, 2020
ಅಷ್ಟಕ್ಕೂ ಕಂಗನಾ ಎಂಟ್ರಿ ಕೊಡಲು ಕಾರಣವೇನೆಂದರೆ, ಡಿ.ರೂಪಾ ಅವರು ತಮ್ಮ ಪೋಸ್ಟ್ ವಿರುದ್ಧ ಕಮೆಂಟ್ ಹಾಕಿರುವವರ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡುವುದಾಗಿ ಹೇಳಿದ್ದ ಕಾರಣ. ‘ಅರ್ಧಂಬರ್ಧ ಜ್ಞಾನದೊಂದಿಗೆ ಜನರ ಹಾದಿ ತಪ್ಪಿಸುವಿರಿ. ನೀವು ಸರ್ಕಾರದ ಆದೇಶವನ್ನು ಪಾಲನೆ ಮಾಡುತ್ತಿಲ್ಲ ಹಾಗೂ ಆದೇಶದ ಬಗ್ಗೆ ಗೌರವವನ್ನೂ ತೋರುತ್ತಿಲ್ಲ, ನಿಮ್ಮಂಥ ಟ್ರೋಲರ್ಗಳೊಂದಿಗೆ ಚರ್ಚೆ ಮುಂದುವರಿಸುವುದು ಅನವಶ್ಯಕ’ ಎಂದು ರೂಪಾ ಟ್ವೀಟಿಸಿದ್ದು, ಕೆಲವು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುತ್ತೇನೆ ಎಂದಿದ್ದರು.
ಈ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿ ‘ಪುರಾಣಗಳಲ್ಲಿ ಪಟಾಕಿಯ ಪ್ರಸ್ತಾಪವಿರುವ ಬಗ್ಗೆ ದಾಖಲೆಗಳನ್ನು ಒದಗಿಸಿದ್ದರೂ, ಅವುಗಳನ್ನು ರೂಪಾ ಅವರು ಒಪ್ಪಲಿಲ್ಲ. ಬದಲಿಗೆ ಬ್ಲಾಕ್ ಮಾಡುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾರೆ.
ಈ ಮಾತಿಗೆ ಸಮ್ಮತಿ ಸೂಚಿಸಿರುವ ನಟಿ ಕಂಗನಾ’ ಸಾಮಾನ್ಯ ಜನರ ಮೂಲಭೂತ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರವು ಡಿ.ರೂಪಾ ಅವರಂತಹ ಜನರನ್ನು ನೇಮಿಸುತ್ತದೆ. ಆದರೆ, ಅವರು ನೋಡಿದರೆ ಸತ್ಯ ಆಧಾರಗಳಿಂದ ವಾದದಲ್ಲಿ ಗೆಲ್ಲುವ ಬದಲು ಖಾತೆಗಳನ್ನೇ ಬ್ಲಾಕ್ ಮಾಡಿದ್ದಾರೆ, ನಿಮಗೆ ನಾಚಿಗೆಯಾಗಬೇಕು’ ಎಂದಿದ್ದಾರೆ.
ಅಷ್ಟು ಸಾಲದು ಎಂಬಂತೆ, ‘ಮೀಸಲಾತಿಯ ಅಡ್ಡ ಪರಿಣಾಮಕ್ಕೆ ಉದಾಹರಣೆ ಇದು. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಶಮನಗೊಳಿಸುವ ಕಾರ್ಯಕ್ಕಿಂತ ಘಾಸಿ ಮಾಡುತ್ತಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ನನಗೆ ಏನೊಂದೂ ತಿಳಿದಿಲ್ಲ, ಆದರೆ ಅವರ ಅಸಾಮರ್ಥ್ಯದಿಂದಾಗಿ ಹತಾಶೆ ಹೊರಬರುತ್ತಿರುವುದು ಖಂಡಿತ’ ಎಂದಿದ್ದಾರೆ.
ಸದ್ಯ ಈ ವಾದ, ಪ್ರತಿವಾದದ ಸರಣಿ ಮುಂದುವರೆದಿದ್ದು, ಎಲ್ಲಿಯವರೆಗೆ ಬಂದು ನಿಲ್ಲುತ್ತದೋ ಸದ್ಯಕ್ಕಂತೂ ಗೊತ್ತಿಲ್ಲ…
ಸೋನಿಯಾ- ಮನ್ಮೋಹನ್ ಸಿಂಗ್ ಸಿಕ್ರೇಟ್ ಬಿಚ್ಚಿಟ್ಟ ಒಬಾಮಾ: ಭಾರತದಲ್ಲಿ ಸಂಚಲನ!
ರಾಜ್ಯಕ್ಕೆ ಶೀಘ್ರವೇ ಇನ್ನೊಂದು ಜಿಲ್ಲೆ- ಸಂಪುಟದಲ್ಲಿ ಸಿಕ್ತು ತಾತ್ವಿಕ ಅನುಮೋದನೆ