More

    ಶಿರಚ್ಛೇದನ ಮಾಡಿದವರಿಗೆ ಐಸಿಸ್​ ನಂಟು? ಮೃತ ಟೈಲರ್​ ಕುಟುಂಬಕ್ಕೆ 31 ಲಕ್ಷ ರೂ. ಪರಿಹಾರ- ಇಬ್ಬರಿಗೆ ಉದ್ಯೋಗ

    ಉದರಪುರ (ರಾಜಸ್ಥಾನ): ಹಿಂದೂ ದೇವರನ್ನು ಅವಹೇಳನ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ನಾಯಕಿ ನೂಪುರ್​ ಶರ್ಮಾ ಪ್ರವಾದಿ ಮೊಹಮ್ಮದ್​ ವಿರುದ್ಧ ನೀಡಿರುವ ಹೇಳಿಕೆಗೆ ಕಾಂಗ್ರೆಸ್ಸಿಗರು ಸೇರಿದಂತೆ ಇಸ್ಲಾಮಿಕ್​ ರಾಷ್ಟ್ರಗಳು ಪ್ರತಿಭಟನೆ ಮಾಡುತ್ತಿರುವ ನಡುವೆಯೇ, ರಾಜಸ್ಥಾನದ ಉದಯಪುರದಲ್ಲಿ ನಡೆದ ಭೀಕರ ಕೊಲೆ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.

    ನೂಪುರ್​ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್​ ಹಾಕಿದ ಟೈಲರ್​ ಕನ್ಹಯ್ಯಾಲಾಲ್​ ಎಂಬುವವರ ಶಿರಚ್ಛೇದನ ಮಾಡಿದ್ದಾರೆ ಕ್ರೂರಿಗಳು. ಬಟ್ಟೆ ಹೊಲಿಸಿಕೊಳ್ಳುವ ನೆಪದಲ್ಲಿ ಕನ್ಹಯ್ಯಾಲಾಲ್​ ಅವರ ಅಂಗಡಿಗೆ ಬಂದಿರುವ ಇಬ್ಬರು ಕ್ರೂರಿಗಳು ನಂತರ ಕನ್ಹಯ್ಯಾಲಾಲ್​ ಅವರ ರುಂಡವನ್ನು ಕತ್ತರಿಸಿ, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಇಬ್ಬರನ್ನೂ ಪೊಲೀಸರು ಕೂಡಲೇ ಬಂಧಿಸಿದ್ದಾರೆ.

    ಇದೀಗ ಟೈಲರ್​ ಕನ್ಹಯ್ಯಾಲಾಲ್ ಕುಟುಂಬಕ್ಕೆ ರಾಜಸ್ಥಾನ ಸರ್ಕಾರ, 31 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಅವರ ಕುಟುಂಬದ ಇಬ್ಬರಿಗೆ ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ಹುದ್ದೆಯನ್ನು ನೀಡುವುದಾಗಿ ಸರ್ಕಾರ ಹೇಳಿದೆ.

    ಇನ್ನು, ಘಟನೆ ಕುರಿತು ತನಿಖೆ ನಡೆಸಿರುವ ಪೊಲೀಸರಿಗೆ ಈ ಇಬ್ಬರು ಕ್ರೂರಿಗಳು, ಐಸಿಸ್ ನಂಟು ಹೊಂದಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ. ಇದರ ಹಿಂದೆ ಭಾರಿ ದೊಡ್ಡ ಉಗ್ರರ ಜಾಲ ಇರುವ ಶಂಕೆ ವ್ಯಕ್ತವಾಗಿದೆ.

    ಕಲ್ಲಂಗಡಿ ಒಡೆದಾಗ ಗಡಿಪಾರು ಮಾಡು ಎಂದ ಬುದ್ಧಿಜೀವಿಗಳೇ, ರುಂಡ ಕತ್ತರಿಸಿದ್ದಾರೆ… ಬಾಯಿ ಮುಚ್ಚಿಕೊಂಡಿರುವಿರೇಕೆ?

    ಹಿಂದು ಹತ್ಯೆ ಕೇಸ್​: ಉದಯಪುರದಲ್ಲಿ 144 ಸೆಕ್ಷನ್​ ಜಾರಿ, ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದು ಕೊಲೆಯಾದ ವ್ಯಕ್ತಿಯಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts