More

    ಪ್ಲೀಸ್‌ ಗಂಡನಿಂದ ರಕ್ಷಿಸಿ ಎಂದರೂ ಕಿವಿಗೊಡದ ಪೊಲೀಸರು: ಹಲವಾರು ಕನಸು ಕಂಡಿದ್ದ ಯುವತಿ ನೇಣಿಗೆ ಶರಣು

    ಕನ್ನೂರ (ಕೇರಳ): ಜೀವನದಲ್ಲಿ ಹಲವಾರು ಕನಸುಗಳನ್ನು ಕಂಡಿದ್ದು, ಒಳ್ಳೆಯ ಭವಿಷ್ಯದ ಬಗ್ಗೆ ಸದಾ ಆಲೋಚಿಸುತ್ತಿದ್ದ ನವವಿವಾಹಿತೆಯೊಬ್ಬಳು ದಾರುಣವಾಗಿ ಅಂತ್ಯ ಕಂಡಿದ್ದಾಳೆ. ಗಂಡನ ಮನೆಯಲ್ಲಿನ ಕಿರುಕುಳ ತಾಳದೇ ನೇಣಿಗೆ ಕೊರಳೊಡಿದ್ದಾಳೆ.

    ಇದು ನಡೆದಿರುವುದು ಕೇರಳದ ಕನ್ನೂರಿನಲ್ಲಿ. 26 ವರ್ಷದ ಯುವತಿ ಸುನೀಶಾ ಆತ್ಮಹತ್ಯೆ ಮಾಡಿಕೊಂಡವಳು. ಗಂಡ ಹಾಗೂ ಗಂಡ ವಿಜೇಶ್‌ ಹಾಗೂ ಆತನ ಮನೆಯವರ ದೌರ್ಜನ್ಯ ತಾಳದೇ ಸುನೀಶಾ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಒಂದು ವಾರ ಮುಂಚಿತವಾಗಿ ಠಾಣೆಯಲ್ಲಿ ದೂರು ನೀಡಿದ್ದಳು. ಆದರೆ ಪೊಲೀಸರು ಕೌಟುಂಬಿಕ ದೌರ್ಜನ್ಯ ಕೇಸ್​ ದಾಖಲು ಮಾಡಿಕೊಳ್ಳದೇ ನಿರ್ಲಕ್ಷ್ಯ ವಹಿಸಿದ್ದೇ ತಮ್ಮ ಮಗಳ ಸಾವಿಗೆ ಕಾರಣ ಎಂದು ಆಕೆಯ ಪಾಲಕರು ಆರೋಪಿಸುತ್ತಿದ್ದಾರೆ.

    ಸಾಲದು ಎಂಬುದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಳಿಕವೂ ಪೊಲೀಸರು ಇದೊಂದು ಸಹಜ ಸಾವು ಎಂದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಗಂಡನ ಮನೆಯ ದೌರ್ಜನ್ಯ ತಾಳದೇ ಸುನೀಶಾ ಪತಿ ವಿಜೀಶ್ ಜತೆ ಜಗಳವಾಡಿದ್ದ ಹಾಗೂ ಆತನ ತಾಯಿ ಕಿರುಕುಳ ನೀಡುತ್ತಿರುವ ಕೆಲವೊಂದು ಆಡಿಯೋ ತುಣುಕು ಕೂಡ ಇದೀಗ ಪೊಲೀಸರಿಗೆ ಲಭ್ಯವಾಗಿದೆ. ಗಂಡನ ಮನೆಯವರು ಮೇಲಿಂದ ಮೇಲೆ ತನ್ನ ಮೇಲೆ ಹಲ್ಲೆ ನಡೆಸುತ್ತಿರುವುದಾಗಿ ಸುನೀಶಾ ತನ್ನ ಸಹೋದರನೊಂದಿಗೆ ಕರೆ ಮಾಡಿ ಕೂಡ ಮಾತನಾಡಿದ್ದು, ಅದು ಕೂಡ ರೆಕಾರ್ಡಿಂಗ್​ಇದೆ.

    ಇಷ್ಟೆಲ್ಲಾ ಆದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ. ತನ್ನ ಮಗಳ ಸಾವಿಗೆ ಅವರೇ ಕಾರಣ ಎಂದು ಸುನೀಶಾ ಪಾಲಕರು ಆರೋಪಿಸುತ್ತಿದ್ದಾರೆ. ಆದರೆ ಪೊಲೀಸರು ಹೇಳುತ್ತಿರುವುದೇ ಬೇರೆ. ಸುನೀಶಾ ತಮಗೆ ದೂರು ನೀಡುತ್ತಿದ್ದಂತೆಯೇ ಎರಡೂ ಕುಟುಂಬದವರನ್ನ ಕರೆದು ಸಮಾಲೋಚನೆ ನಡೆಸಲಾಗಿತ್ತು. ಇದಾದ ಬಳಿಕ ಸುನೀಶಾ ಪತಿಯೊಂದಿಗೆ ವಾಸ ಮಾಡುವುದಾಗಿ ಹೇಳಿ ಹೋಗಿದ್ದರು ಎಂದು ತಿಳಿಸಿದ್ದಾರೆ. ಸದ್ಯ ತನಿಖೆ ಮುಂದುವರೆದಿದೆ. ಆದರೆ ಬಾರದ ಲೋಕಕ್ಕೆ ಹೋಗಿರುವ ಮಗಳನ್ನು ನೆನೆದು ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ.

    ಗಂಡ ಪ್ರೀತಿಯಿಂದ ತಂದ ಪಾನಿಪುರಿಯೇ ಪತ್ನಿಯ ಆತ್ಮಹತ್ಯೆಗೆ ಕಾರಣವಾಯ್ತು! ಅಷ್ಟಕ್ಕೂ ಆಗಿದ್ದೇನು?

    ಗಂಡ-ಹೆಂಡತಿ ತಮಾಷೆಗಾಗಿ ಮಾಡಿಸಿದರು ಮಕ್ಕಳ ಡಿಎನ್‌ಎ ಪರೀಕ್ಷೆ- ವರದಿ ನೋಡಿ ಕಕ್ಕಾಬಿಕ್ಕಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts