ಪ್ರಿಯ ಸೋನಿಯಾಜಿ… ಕೆಲಸ ಮಾಡುವವರಿಗೆ ಬೆಲೆಯೇ ಇಲ್ಲದೆಡೆ ನಾನಿರಲಾರೆ- ‘ಕೈ’ಗೆ ಖುಷ್ಬೂ ಬೈಬೈ!

ಚೆನ್ನೈ: ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ವಕ್ತಾರೆ ಹಾಗೂ ಬಹುಭಾಷಾ ನಟಿ ಖಷ್ಟೂ ಸುಂದರ್​ ಅವರು ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮ ಪತ್ರ ರವಾನಿಸಿರುವ ಖುಷ್ಬು, ತನಗೆ ಕಾಂಗ್ರೆಸ್​ನಲ್ಲಿ ಇರಲು ಇಷ್ಟವಿಲ್ಲ ಎಂದು ಬರೆದಿದ್ದಾರೆ. 2014ರ ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್​ನ ಸಿದ್ಧಾಂತದಿಂದಾಗಿ ತಾನು ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಹೆಸರು, ಕೀರ್ತಿ, ಹಣದ ಆಸೆ ಇರದ ಕಾರಣ ಅಲ್ಲಿಯೇ ಮುಂದುವರೆಯಲು ಇಚ್ಛಿಸಿದ್ದೆ. ಆದರೆ ಉನ್ನತ ಸ್ಥಾನದಲ್ಲಿ ಇರುವ ಕೆಲವರಿಗೆ ರಾಜಕೀಯದ ಮೂಲವೇ ಗೊತ್ತಿಲ್ಲ. … Continue reading ಪ್ರಿಯ ಸೋನಿಯಾಜಿ… ಕೆಲಸ ಮಾಡುವವರಿಗೆ ಬೆಲೆಯೇ ಇಲ್ಲದೆಡೆ ನಾನಿರಲಾರೆ- ‘ಕೈ’ಗೆ ಖುಷ್ಬೂ ಬೈಬೈ!