ನಟ, ಬರಹಗಾರ ಕೃಷ್ಣ ನಾಡಿಗ್​ ಇನ್ನಿಲ್ಲ- ಶೂಟಿಂಗ್​ ವೇಳೆ ಹೃದಯಾಘಾತ

ಬೆಂಗಳೂರು: ಕನ್ನಡದ ಹಲವಾರು ಧಾರಾವಾಹಿಯಲ್ಲಿ ನಟಿಸಿದ್ದ ಪ್ರಸಿದ್ಧ ನಟ, ಬರಹಗಾರ ಕೃಷ್ಣ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ಶೂಟಿಂಗ್‌ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಮೊದಲಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ‘ಮಿಲನ’, ‘ದೇವಿ’, ‘ಪಾರು’ ಮುಂತಾದ ಧಾರಾವಾಹಿಗಳಲ್ಲಿ ಇವರು ನಟಿಸಿದ್ದರು. ಸುಮಾರು ನಾಲ್ಕುದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ, ಬರಹಗಾರರಾಗಿ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿನ ಇವರ ಸಾಧನೆಗೆ ಕೆಂಪೇಗೌಡ ಪ್ರಶಸ್ತಿ ಕೂಡ ಸಂದಿತ್ತು. ಇವರು ಪತ್ನಿ ಗೀತಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. … Continue reading ನಟ, ಬರಹಗಾರ ಕೃಷ್ಣ ನಾಡಿಗ್​ ಇನ್ನಿಲ್ಲ- ಶೂಟಿಂಗ್​ ವೇಳೆ ಹೃದಯಾಘಾತ