ಹೈದರಾಬಾದ್: ಚಲಿಸುತ್ತಿದ್ದ ರೈಲನ್ನು ಹತ್ತುವ ಭರದಲ್ಲಿ ಅಥವಾ ರೈಲು ಚಲಿಸುತ್ತಿರುವಾಗಲೇ ಇಳಿಯುವ ಅವಸರದಲ್ಲಿ ಪ್ರಾಣವನ್ನು ಕಳೆದುಕೊಳ್ಳುವವರು ಇದ್ದಾರೆ. ಅಂಥದ್ದೇ ಒಂದು ಘಟನೆ ಇಲ್ಲಿಯೂ ನಡೆಯುತ್ತಿತ್ತು. ಆದರೆ ಅಲ್ಲಿದ್ದ ಲೇಡಿ ಪೊಲೀಸ್ ಒಬ್ಬರು ವ್ಯಕ್ತಿಯ ಪ್ರಾಣವನ್ನು ಕಾಪಾಡಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕಾಲುಜಾರಿ ಕೆಳಗೆ ಬಿದ್ದ ವ್ಯಕ್ತಿ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ ಮಹಿಳಾ ಕಾನ್ಸ್ಟೆಬಲ್ ಉಳಿಸಿದ್ದಾರೆ. ಈ ಕುರಿತು ರೈಲ್ವೆ ಸಚಿವಾಲಯವು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಮಹಿಳಾ ಕಾನ್ಸ್ಟೆಬಲ್ ಕಾರ್ಯವನ್ನು ಶ್ಲಾಘಿಸಿದೆ. ಪರರ ಪ್ರಾಣವನ್ನು ಉಳಿಸುವುದು ಮೊದಲ ಕರ್ತವ್ಯ ಎಂದು ಶೀರ್ಷಿಕೆ ನೀಡಲಾಗಿದೆ.
Serving Humanity First:
An alert RPF woman constable of "Meri Saheli" team at Visakhapatnam Railway station rescued a passenger falling under a moving train.
The episode was caught on the body-worn camera of RPF personnel. pic.twitter.com/05FJvP8Xju— Ministry of Railways (@RailMinIndia) February 10, 2021
ಇದೀಗ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ. ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲನ್ನು ಏರಲು ಮುಂದಾಗಿ ಕಾಲು ಜಾರಿ ಕೆಳಗೆ ಬೀಳುತ್ತಾನೆ. ಇದನ್ನು ಗಮನಿಸಿದ ಅಲ್ಲೇ ಇದ್ದ ಮಹಿಳಾ ಕಾನ್ಸ್ಟೆಬಲ್ ಓಡಿ ಹೋಗಿ ಪ್ರಯಾಣಿಕನನ್ನು ಹಿಂದಕ್ಕೆ ಎಳೆದುಕೊಳ್ಳುತ್ತಾರೆ. ಇಲ್ಲದಿದ್ದರೆ ಆ ಪ್ರಯಾಣಿಕ ರೈಲಿನ ಅಡಿ ಆಗಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇತ್ತು.
ಮಹಿಳಾ ಕಾನ್ಸ್ಟೆಬಲ್ ಅವರನ್ನು ಮೇರಿ ಸಾಹೇಲಿ ಎಂದು ಗುರುತಿಸಲಾಗಿದ್ದು, ಆರ್ಪಿಎಫ್ ಕಾನ್ಸ್ಟೆಬಲ್ ಆಗಿರುವ ಮೇರಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದೆ. ಚಲಿಸುವ ರೈಲನ್ನು ಹತ್ತುವಾಗ ಹಾಗೂ ಇಳಿಯುವಾಗ ಎಷ್ಟು ಜಾಗೃತರಾಗಿರಬೇಕು ಎನ್ನುವುದನ್ನು ಈ ವಿಡಿಯೋ ತೋರಿಸುತ್ತದೆ. ಎಲ್ಲರಿಗೂ ಈ ಪ್ರಯಾಣಿಕನಂತೆ ಅದೃಷ್ಟ ಸಿಗದೇ ಹೋಗಬಹುದಲ್ಲವೆ?
ರೈತ ಮುಖಂಡರಿಂದ ಜೀವಕ್ಕೆ ಅಪಾಯವಿದೆ- ಹಿಂಸಾಚಾರದ ಕುರಿತು ನಟ ದೀಪ್ ಸಿಧು ಹೇಳಿರುವ ಮಾಹಿತಿ ಇಲ್ಲಿದೆ…
ಮುದ್ದು ಕಂದನ ಜೀವ ಉಳಿಸಲು ₹6 ಕೋಟಿ ಜಿಎಸ್ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ
ರೈತರ ವಿಷಯದಲ್ಲಿ ಮೋದಿ ವಿರುದ್ಧ ಹೇಳಿಕೆ ನೀಡಿದ್ದ ಕೆನಡಾ ಪ್ರಧಾನಿ ಮಾಡಿಕೊಂಡರೊಂದು ಕಳಕಳಿಯ ಮನವಿ…
ಕಾರಿನ ಹ್ಯಾಂಡ್ಬ್ರೇಕ್ ಹಾಕದೇ ಮೂತ್ರವಿಸರ್ಜನೆಗೆ ಹೋದ ಚಾಲಕ- ನಾಲ್ವರ ದುರ್ಮರಣ