ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣದೊಂದಿಗೆ ಪರಾರಿಯಾಗಿರುವ ಘಟನೆ ಮಂಗಳೂರಿನ ಬರ್ಕೆಯ ಗಾಂಧಿನಗರದಲ್ಲಿ ನಡೆದಿದೆ.
ರೇಷ್ಮಾ (21) ಎಂಬ ಯುವತಿ ನಿಶ್ಚಿತಾರ್ಥವಾಗುತ್ತಿದ್ದಂತೆಯೇ ಪರಾರಿಯಾಗಿದ್ದಾಳೆ. ಈಕೆ ಗದಗ ಮೂಲದ ಯಶೋಧ ದಂಪತಿಯ ಪುತ್ರಿಯಾಗಿದ್ದಾಳೆ. ಈ ದಂಪತಿ ಮಂಗಳೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದಾರೆ.
ಈಕೆಗೆ ಈಚೆಗೆ ನಿಶ್ಚಿತಾರ್ಥವಾಗಿತ್ತು. ಈ ಸಮಯದಲ್ಲಿ ಸುಮಾರು 1 ಲಕ್ಷ ಬೆಲೆಬಾಳುವ ಒಂದು ಚಿನ್ನದ ಸರ, 50 ಸಾವಿರ ರೂ ಬೆಲೆಬಾಳುವ ಉಂಗುರ, ಕಿವಿಯೋಲೆ ಮತ್ತು ಬೆಳ್ಳಿ ಕಾಲು ಗೆಜ್ಜೆ ಹಾಕಲಾಗಿತ್ತು. ಈ ಎಲ್ಲಾ ಆಭರಣಗಳೂ ಸೇರಿದಂತೆ ಮನೆಯಲ್ಲಿದ್ದ ಹಣವನ್ನೂ ತೆಗೆದುಕೊಂಡು ಯುವತಿ ಪರಾರಿಯಾಗಿದ್ದಾಳೆ.
ಮನೆಯ ಅಕೌಂಟ್ನಲ್ಲಿದ್ದ 90 ಸಾವಿರ ಹಣವನ್ನು ಅಕ್ಬರ್ ಎಂಬ ವ್ಯಕ್ತಿಯ ಹೆಸರಿಗೆ ವರ್ಗಾಯಿಸಿರುವುದು ಬೆಳಕಿಗೆ ಬಂದಿದೆ. ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಯುವತಿಯನ್ನು ಸಂಪರ್ಕಿಸಿದ್ದಾರೆ. ಈ ಸಮಯದಲ್ಲಿ ಆಕೆ ನಾನು ಮೇಜರ್, ಹೀಗೆ ಮಾಡಲು ನನಗೆ ಅಧಿಕಾರ ಇದೆ. ಯಾರೂ ಏನೂ ಮಾಡಲು ಆಗಲ್ಲ ಎಂದಿದ್ದಾಳೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಡ್ಯದಲ್ಲೊಂದು ಭಾರಿ ದುರಂತ: ಹಂದಿ ಎಂದು ತಿಳಿದು ಬೇಟೆಗಾರನಿಂದ ಯುವಕನಿಗೆ ಗುಂಡು
VIDEO: ಬೆಳ್ಳಂಬೆಳಗ್ಗೆ ಜನರನ್ನು ಬೇಸ್ತುಬೀಳಿಸಿದ ಕಾಂಡೋಮ್- ತುಮಕೂರು ಹೆದ್ದಾರಿಯಲ್ಲಿ ರಾಶಿ ರಾಶಿ…