ಕೊಲ್ಹಾಪುರ (ಮಹಾರಾಷ್ಟ್ರ): ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯ ಗೇಟ್ ರಿಪೇರಿ ವೇಳೆ ಅವಘಡ ಸಂಭವಿಸಿದ್ದು, ತಾಂತ್ರಿಕ ದೋಷದಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದುಬಂದಿದೆ.
ಸುಮಾರು 18 ಅಡಿಗಳಷ್ಟು ಗೇಟ್ ಎತ್ತರಿಸಿ ಅಧಿಕಾರಿಗಳು ಕಾಮಗಾರಿ ಕೈಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ನದಿಗೆ ಹರಿದು ಬರುತ್ತಿದೆ, ಅಧಿಕಾರಿಗಳ ಎಡವಟ್ಟಿನಿಂದ ನದಿ ತೀರದ ಜನರು ಕಂಗೆಟ್ಟು ಹೋಗಿದ್ದು, ಇಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ವೇದಗಂಗಾ ನದಿ ತೀರದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಕಂಗಾಲಾಗಿ ಹೋಗಿದ್ದಾರೆ. ಅಧಿಕಾರಿಗಳು ಮಾಡಿರುವ ಈ ಎಡವಟ್ಟಿನಿಂದ ಕರ್ನಾಟಕದತ್ತ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ಒಟ್ಟಾರೆ ಎಂಟು ಟಿ ಎಂ ಸಿ ಸಾಮರ್ಥ್ಯ ಇರುವ ಜಲಾಶಯ ಇದಾಗಿದೆ. ಆರು ಗೇಟ್ಗಳ ಪೈಕಿ ಒಂದು ಗೇಟ್ ದುರಸ್ಥಿ ಮಾಡುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. (ದಿಗ್ವಿಜಯ ನ್ಯೂಸ್)
ಇಲ್ಲಿದೆ ನೋಡಿ ವಿಡಿಯೋ:
ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯ ಗೇಟ್ ರಿಪೇರಿ ವೇಳೆ ಅವಘಡ ಸಂಭವಿಸಿದ್ದು, ತಾಂತ್ರಿಕ ದೋಷದಿಂದ ಅಪಾರ ಪ್ರಮಾಣದ ನೀರು ಕರ್ನಾಟಕದತ್ತ ಧಾವಿಸಿ ಬರುತ್ತಿದೆ. pic.twitter.com/2KjyNeevy1
— Vijayavani (@VVani4U) December 29, 2021
‘ನಮಗೆ ಕೋಟಿಯಷ್ಟು ಮತಹಾಕಿ, 50-70 ರೂ.ಗೆ ಕ್ವಾರ್ಟರ್ ಬಾಟಲ್ ತಗೊಂಡು ಎನ್ಜಾಯ್ ಮಾಡಿ…’