ಬಾಳ್​ ಠಾಕ್ರೆ ಪರಂಪರೆ ಮುಂದುವರೆಸಲು ಜೈಲಿಗೆ ಹೋಗಲೂ ಸಿದ್ಧ ಎಂದು ಭಾವುಕರಾದ ಸಂಸದ ರಾವುತ್​!

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಟ್ವೀಟ್​ ಮಾಡಿರುವ ಶಿವಸೇನಾ ಸಂಸದ ಸಂಜಯ್ ರಾವತ್​, ಮಹಾರಾಷ್ಟ್ರ ಓರ್ವ ಸಂವೇದನಾಶೀಲ ಹಾಗೂ ಸುಸಂಸ್ಕೃತ ಮುಖ್ಯಮಂತ್ರಿಯನ್ನು ಕಳೆದುಕೊಂಡಿದೆ ಎಂದು ವಿಷಾದಿಸಿದ್ದಾರೆ. ಶಿವಸೇನೆ ಸಂಸ್ಥಾಪಕ ಬಾಳ್​ ಠಾಕ್ರೆ ಅವರ ಪರಂಪರೆಯನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ ಮತ್ತು ಇದಕ್ಕಾಗಿ ಜೈಲಿಗೆ ಹೋಗಲು ಸಿದ್ಧ ಎಂದಿರುವ ರಾವುತ್​, ವಿಶ್ವಾಸಘಾತುಕರಿಗೆ ಎಂದಿಗೂ ಒಳ್ಳೆಯದಾಗುವುದಿಲ್ಲ. ಇತಿಹಾಸವನ್ನು ನೋಡಿದಾಗ ಇದು ಸಾಬೀತಾಗಿದೆ ಎಂದು ರೆಬೆಲ್​ ಶಾಸಕರ ವಿರುದ್ಧ ಗರಂ ಆಗಿದ್ದಾರೆ. … Continue reading ಬಾಳ್​ ಠಾಕ್ರೆ ಪರಂಪರೆ ಮುಂದುವರೆಸಲು ಜೈಲಿಗೆ ಹೋಗಲೂ ಸಿದ್ಧ ಎಂದು ಭಾವುಕರಾದ ಸಂಸದ ರಾವುತ್​!