ಮೂರನೇ ಬಾರಿ ಸಿಎಂ ಆಗಿ ಗದ್ದುಗೆಗೇರಿದ ಮಮತಾ- ಆರು ತಿಂಗಳ ಒಳಗೆ ಗೆದ್ದರೆ ಖುರ್ಚಿ ಭದ್ರ

ಕೋಲ್ಕತಾ: ಮೂರನೇ ಬಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಜಗದೀಪ್ ಧನ್‍ಖಡ್ ಪ್ರಮಾಣ ವಚನ ಬೋಧಿಸಿದರು. ಈ ಸಮಾರಂಭದಲ್ಲಿ ಟಿಎಂಸಿಯ ಚುನಾವಣೆಯ ರಣತಂತ್ರಗಾರ ಪ್ರಶಾಂತ್ ಕಿಶೋರ್, ಸಂಬಂಧಿ ಅಭಿಷೇಕ್ ಬ್ಯಾನರ್ಜಿ, ಪ್ರದೀಪ್ ಭಟ್ಟಾಚಾರ್ಯ ಸೇರಿದಂತೆ ಬೆರಳಿಕೆಯಷ್ಟು ಟಿಎಂಸಿ ನಾಯಕರು ಉಪಸ್ಥಿತರಿದ್ದರು. ಮಮತಾ ಅವರನ್ನು ಹೊರತುಪಡಿಸಿ ಬೇರೆ ಯಾರೂ ಇಂದು ಪ್ರಮಾಣ ವಚನ ಪಡೆಯಲಿಲ್ಲ. ಈ ಮೂಲಕ ಮಮತಾ ಮೂರನೆ ಬಾರಿ ಮುಖ್ಯಮಂತ್ರಿ ಗದ್ದುಗೆಗೆ … Continue reading ಮೂರನೇ ಬಾರಿ ಸಿಎಂ ಆಗಿ ಗದ್ದುಗೆಗೇರಿದ ಮಮತಾ- ಆರು ತಿಂಗಳ ಒಳಗೆ ಗೆದ್ದರೆ ಖುರ್ಚಿ ಭದ್ರ