ಬೆಚ್ಚಿಬಿದ್ದ ಮಂಡ್ಯ: ದೇವಾಲಯದ ಆವರಣದಲ್ಲಿಯೇ ಅರ್ಚಕರು ಸೇರಿ ಮೂವರ ಕೊಲೆ!

ಮಂಡ್ಯ: ನಿನ್ನೆ ಮಧ್ಯರಾತ್ರಿ ಮಂಡ್ಯದ ಹೊರವಲಯದ ಶ್ರೀಅರ್ಕೇಶ್ವರ ದೇವಾಲಯದ ಆವರಣದಲ್ಲಿ ಮೂರು ಮಂದಿ ಕೊಲೆ ನಡೆದಿದ್ದು, ಇಡೀ ನಗರ ಬೆಚ್ಚಿ ಬಿದ್ದಿದೆ. ಇಂದು ನಸುಕಿನ ವೇಳೆ ಅರ್ಚಕರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಶ್ರೀಅರ್ಕೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಗಣೇಶ, ಪ್ರಕಾಶ್​, ಆನಂದ್​ ಕೊಲೆಯಾದವರು. ಇದರಲ್ಲಿ ಇಬ್ಬರು ಅರ್ಚಕರು, ಒಬ್ಬ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ದೇಗುಲದ ಗೋಪುರ ಮುಖ್ಯದ್ವಾರದ ಸಮೀಪದಲ್ಲಿ ಪ್ರಾಂಗಣದಲ್ಲಿ ಮಲಗಿದ್ದವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಇವರೆಲ್ಲರೂ … Continue reading ಬೆಚ್ಚಿಬಿದ್ದ ಮಂಡ್ಯ: ದೇವಾಲಯದ ಆವರಣದಲ್ಲಿಯೇ ಅರ್ಚಕರು ಸೇರಿ ಮೂವರ ಕೊಲೆ!