ಬೆಂಗಳೂರು: ರಾಜ್ಯ ಸರ್ಕಾರದ ಕೂತುಹಲಕಾರಿ ಬೆಳವಣಿಯಲ್ಲಿ ಹೆಸರು ಕೇಳಿ ಬಂದಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ನೀಡಿರುವ ಅನಾಮಧೇಯ ಕರೆಗಳ ಮತ್ತು ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ಚುರುಕೊಂಡಿದೆ.
ಕೇಂದ್ರ ವಿಭಾಗ ಡಿಸಿಪಿ ಎಂ.ಎನ್.ಅನುಚೇತ್ ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ಉಪ ವಿಭಾಗ ಎಸಿಪಿ ಯತಿರಾಜ್ಗೆ ತನಿಖೆ ಜವಾಬ್ದಾರಿ ವಹಿಸಿದ್ದಾರೆ. ಆದರೆ, ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೇಶ ವ್ಯಾಪಿ ಸದ್ದು ಮಾಡಿದ್ದ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಎಸಿಪಿ ಯತಿರಾಜ್, ಸಿಬಿಐ ತನಿಖೆಗೆ ಗುರಿಯಾಗಿದ್ದರು. ಇದೀಗ ಮತ್ತೆ ಸರ್ಕಾರದ ವಿರುದ್ಧ ಕೇಳಿಬಂದಿರುವ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಅದೇ ಎಸಿಪಿಗೆ ವಹಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಶಾಸಕ ಅರವಿಂದ್ ಬೆಲ್ಲದ್, ಇತ್ತೀಚೆಗೆ ಡಿಜಿಪಿ ಪ್ರವಿಣ್ ಸೂದ್ ಅವರನ್ನು ಭೇಟಿ ಮಾಡಿ ಅಪರಿಚಿತರು ಕರೆ ಮಾಡುತ್ತಿದ್ದಾರೆ. ಮೂರ್ನಾಲ್ಕು ಕರೆಗಳು ಬಂದಾಗ ಫೋನ್ ಕದ್ದಾಲಿಕೆ ಆಗುತ್ತಿರುವ ಅನುಮಾನ ಹುಟ್ಟುಕೊಂಡಿದೆ. ಈ ಕುರಿತು ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದರು. ಈ ದೂರಿನ ಪ್ರತಿಯನ್ನು ಡಿಜಿಪಿ ಪ್ರವಿಣ್ ಸೂದ್, ವರ್ಗಾವಣೆ ಮಾಡಿದ್ದಾರೆ. ಇದರ ಆಧಾರದ ಮೇಲೆ ತನಿಖೆ ನಡೆಸಲು ಕಬ್ಬನ್ ಪಾರ್ಕ್ ಉಪವಿಭಾಗ ಎಸಿಪಿ ಯತಿರಾಜ್ಗೆ ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಕಮಲ್ ಪಂತ್, ಶಾಸಕ ಅರವಿಂದ್ ಬೆಲ್ಲದ್ ಅವರ ಪತ್ರದಲ್ಲಿ ಅಸ್ಪಷ್ಟವಾಗಿದೆ. ಹೆಚ್ಚಿನ ಮಾಹಿತಿ ಪಡೆದು ತನಿಖೆ ನಡೆಸಬೇಕಾಗಿದೆ. ಅದಕ್ಕಾಗಿ ಅವರ ಭೇಟಿಗೆ ಎಸಿಪಿ ಯತಿರಾಜ್ ಪ್ರಯತ್ನ ಪಡುತ್ತಿದ್ದಾರೆ. ಕೂಲಂಕುಷವಾಗಿ ಶಾಸಕರಿಂದ ಹೇಳಿಕೆ ಪಡೆದ ಮೇಲೆ ಯಾವ ಆಯಾಮದಲ್ಲಿ ತನಿಖೆ ನಡೆಸಬೇಕೆಂಬುದು ನಿರ್ಧರ ಮಾಡಲಾಗುತ್ತದೆ ಎಂದು ಕಮಲ್ ಪಂತ್ ತಿಳಿಸಿದ್ದಾರೆ.
ರಾತ್ರೋರಾತ್ರಿ ಫೇಮಸ್ ಆಗಿದ್ದ ‘ಬಾಬಾ ಕಾ ಡಾಬಾ’ ಮಾಲೀಕ ಆತ್ಮಹತ್ಯೆಗೆ ಯತ್ನ: ಪರಿಸ್ಥಿತಿ ಗಂಭೀರ
ಇಬ್ಬರನ್ನು ಒಟ್ಟಿಗೇ ಲವ್ ಮಾಡಿದಾತನಿಗೆ ಡಬಲ್ ಧಮಾಕಾ- ಅತ್ತ ಒಬ್ಬಳು, ಇತ್ತ ಇನ್ನೊಬ್ಬಳು!