ಮುಂಬೈ : ಕಳೆದ ತಿಂಗಳು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡ ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್ ಡೆಲ್ಕರ್ ಅವರ ಸಾವಿನ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.
ಹಲವಾರು ವರ್ಷಗಳವರೆಗೆ ಕಾಂಗ್ರೆಸ್ನಲ್ಲಿ ದುಡಿದರೂ, ಕಾಂಗ್ರೆಸ್ನಿಂದ ಟಿಕೆಟ್ ಸಿಗದೇ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಮೋಹನ್ ಅವರ ಆತ್ಮಹತ್ಯೆ ಪ್ರಕರಣ ಇದಾಗಿದೆ.
7 ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದ ಡೆಲ್ಕರ್ ಅವರು, ದಾದ್ರಾ ಮತ್ತು ನಗರ ಹವೇಲಿ ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದರು. ಆದರೆ ಅವರಿಗೆ ಚುನಾವಣೆ ಟಿಕೆಟ್ ನೀಡದ್ದರಿಂದ ತುಂಬಾ ಬೇಸರಗೊಂಡಿದ್ದರು. ನಂತರ ಕಾಂಗ್ರೆಸ್ ಪಕ್ಷ ತೊರೆದು ಕಳೆದ 2019ರ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇಷ್ಟು ವರ್ಷ ಸೇವೆ ಸಲ್ಲಿಸಿದ್ದರೂ ತಮಗೆ ಪಕ್ಷದಲ್ಲಿ ಬೆಲೆ ಇಲ್ಲ ಎಂಬ ಬಗ್ಗೆ ಅವರು ತುಂಬಾ ಬೇಸರಗೊಂಡಿದ್ದರು ಎಂದು ಕಾಂಗ್ರೆಸ್ಸಿಗೇತರರು ಆರೋಪಿಸುತ್ತಿದ್ದರೆ, ಇತ್ತ ಕಾಂಗ್ರೆಸ್ ಬಿಜೆಪಿಯನ್ನು ದೂರತೊಡಗಿದೆ.
ಕಾಂಗ್ರೆಸ್ ಮುಖಂಡ ಸಚಿನ್ ಸಾವಂತ್ ಪತ್ರಿಕಾಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮತ್ತು ಕೇಂದ್ರ ಅಧಿಕಾರಿಗಳ ಕಿರುಕುಳದಿಂದ ಮೋಹನ್ ದೇಲ್ಕರ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ತಮಗೆ ಕಿರುಕುಳ ನೀಡುತ್ತಿರುವ ಬಗ್ಗೆ ಮೋಹನ್ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಹಲವು ಬಾರಿ ಪತ್ರ ಬರೆದು ಸಹಾಯ ಕೋರಿದ್ದರು, ಆದರೆ ಅದನ್ನು ಕಡೆಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮೋಹನ್ ಅವರ ಸಾವು- ಬದುಕಿನ ಬಗ್ಗೆ ಬಿಜೆಪಿ ಮುಖಂಡರು ತಲೆ ಕೆಡಿಸಿಕೊಳ್ಳಲಿಲ್ಲ. ಉದ್ದೇಶಪೂರ್ವಕವಾಗಿ ಅವರ ಮನವಿಯನ್ನು ತಿರಸ್ಕರಿಸಲಾಯಿತು ಎಂದಿದ್ದಾರೆ.
58 ವರ್ಷದ ಮೋಹನ್ ಅವರು ಸೌತ್ ಮುಂಬೈನ ಹೋಟೆಲ್ವೊಂದರಲ್ಲಿ ಫೆಬ್ರವರಿ 22ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಗುಜರಾತಿ ಭಾಷೆಯಲ್ಲಿ ಬರೆದ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿ ಬಿಜೆಪಿ ಇದರಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಇದರ ಜೊತೆಗೆ ಪತ್ರದಲ್ಲಿ ಕಲೆಕ್ಟರ್ ಮತ್ತು ಪೊಲೀಸ್ ಅಧೀಕ್ಷಕರನ್ನು ಸಹ ಹೆಸರಿಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ.
ಲವರ್ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್ ಯುವತಿಯ ಸ್ಟೋರಿ ಇದು…
ಮದುವೆಯಾದ ರಾತ್ರಿ ಸಿಂಹದ ಮರಿ ಬಾಡಿಗೆಗೆ ಪಡೆದರು- ನಿದ್ದೆ ಮಾತ್ರೆ ನೀಡಿದರು? ವಿಡಿಯೋ ನೋಡಿ ನೆಟ್ಟಿಗರು ಗರಂ
ನನ್ನ ಗಂಡನಿಗೆ ಮೊದಲೇ ಮದ್ವೆಯಾಗಿದ್ದು ಗೊತ್ತೇ ಇರಲಿಲ್ಲ, ಮೋಸಕ್ಕೆ ಸಿಲುಕಿರುವ ನನಗೇನು ದಾರಿ?