ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಕಾಂಗ್ರೆಸ್ನ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕಳೆದ ನವೆಂಬರ್ 5 ರಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನ ಸಿಬಿಐ ಬಂಧನ ಮಾಡಿತ್ತು. ಇದಾದ ನಂತರ ಧಾರವಾಡ ಜಿಲ್ಲಾ ಪ್ರಧಾನ ಮತ್ತು ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ಅಲ್ಲಿ ಕೂಡ ಇವರಿಗೆ ಜಾಮೀನು ಸಿಕ್ಕಿರಲಿಲ್ಲ.
ಈ ಆದೇಶ ಪ್ರಶ್ನಿಸಿ ನಂತರ ಹೈಕೋರ್ಟ್ ಮೊರೆ ಹೋಗಿದ್ದರು. ಅನೇಕ ಬಾರಿ ಅರ್ಜಿಯ ವಿಚಾರಣೆ ಮುಂದೂಡುತ್ತ ಬಂದಿತ್ತು. ಇಂದು ವಿಚಾರಣೆ ಸಂಪೂರ್ಣಗೊಳಿಸಿರುವ ಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ. ಜಾಮೀನು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಿದೆ.
ವಿನಯ ಕುಲಕರ್ಣಿ ಪರವಾಗಿ ಶಶಿಕಿರಣ ಶೆಟ್ಟಿ ವಾದ ಮಂಡಿಸಿದ್ದರು. ಈ ಆರೋಪ ನಿರಾಧಾರವಾಗಿದ್ದು, ತಮ್ಮ ಕಕ್ಷಿದಾರರಿಗೆ ಜಾಮೀನು ಮಂಜೂರು ಮಾಡುವಂತೆ ಅವರು ಕೋರಿದ್ದರು. ಆದರೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್.ನಟರಾಜ ಅವರು ವಾದವನ್ನು ಮಾನ್ಯ ಮಾಡದೇ ಅರ್ಜಿ ವಜಾಗೊಳಿಸಿದರು.
VIDEO: ವಿಐಪಿ ಕಾರ್ ಬಿಟ್ಟು ಆಟೋದಲ್ಲಿ ಪಾಕ್ ಪ್ರಧಾನಿ? ಹೀಗೇಕಾಯ್ತೆಂದು ಪ್ರಶ್ನಿಸ್ತಿದ್ದಾರೆ ಜನ!
ನಶೆ ತಾರೆಗೆ ಅಂತೂ ಸಿಕ್ತು ಬೇಲ್: 140 ದಿನಗಳ ಜೈಲುವಾಸದಿಂದ ಹೊರಬರಲಿರುವ ನಟಿ
ವೀರ್ಯಾಣು ಕೊರತೆಯಿಂದ ಮಕ್ಕಳಾಗದಿದ್ದರೆ ಪತ್ನಿಗೆ ಇನ್ನೊಂದು ಮದುವೆಯಾಗಲು ಕೊಡುವಿರಾ?
ಬೈಡೆನ್ಗೆ ಕೊನೆಯ ಪತ್ರ ಬರೆದ ಟ್ರಂಪ್: ಇದು ಸಿಕ್ರೇಟ್- ನಾನು ಹೇಳಲ್ಲ ಎಂದ ನೂತನ ಅಧ್ಯಕ್ಷ