More

    ಪಿಎಫ್​ಐ ಪ್ರತಿಭಟನೆಗೆ ಹೈಕೋರ್ಟ್​ ಕೆಂಡಾಮಂಡಲ: ಸ್ವಯಂ ಪ್ರೇರಿತ ದೂರು ದಾಖಲು- ನ್ಯಾಯಾಂಗ ನಿಂದನೆ ಎಚ್ಚರಿಕೆ

    ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ಎನ್​ಐಎ ದಾಳಿಯನ್ನು ಖಂಡಿಸಿ ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಕೇರಳದಲ್ಲಿ ಬಂದ್​ಗೆ ಕರೆ ನೀಡಿದೆ. ಈ ಕ್ರಮಕ್ಕೆ ಕೇರಳ ಹೈಕೋರ್ಟ್​ ಕೆಂಡಾಮಂಡಲವಾಗಿದೆ.

    ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಪಿಎಫ್‌ಐ ಸಂಘಟನೆಗಳು ಇಸ್ಲಾಂ ಧರ್ಮದ ತೀವ್ರವಾದಿ ಸಂಘಟನೆಗಳಾಗಿವೆ. ಆದರೆ ಈ ಸಂಘಟನೆಗಳನ್ನು ಏಕೆ ಈವರೆಗೆ ನಿಷೇಧಿಸಲಾಗಿಲ್ಲ ಎಂದು ಕಳೆದ ಮೇ ತಿಂಗಳಿನಲ್ಲಿ ವಿಚಾರಣೆಯೊಂದರ ವೇಳೆ ಕೇರಳ ಹೈಕೋರ್ಟ್ ಪ್ರಶ್ನಿಸಿತ್ತು. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇವುಗಳ ಮೇಲೆ ನಡೆಸಿರುವ ದಾಳಿಗೆ ಸಂಬಂಧಿಸಿದಂತೆ ನಡೆಸುತ್ತಿದ್ದ ವಿಚಾರಣೆ ವೇಳೆ ಕೋರ್ಟ್​ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು.

    ಇದೀಗ ಪಿಎಫ್​ಐ ಪ್ರತಿಭಟನೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಕೋರ್ಟ್​ ದೂರು ದಾಖಲಿಸಿಕೊಂಡು, ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ. ‘ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಇದಾಗಲೇ ಹಲವು ತೀರ್ಪುಗಳಲ್ಲಿ ಕೋರ್ಟ್​ಗಳು ಹೇಳುತ್ತಲೇ ಬಂದಿವೆ. ಹೀಗಿರುವಾಗ ಪಿಎಫ್​ಐ ಹೇಗೆ ಪ್ರತಿಭಟನೆ ಮಾಡಿ ಬಂದ್​ಗೆ ಕರೆ ನೀಡಿದೆ’ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು. ‘ಕೋರ್ಟ್​ ಆದೇಶವನ್ನು ಉಲ್ಲಂಘನೆ ಮಾಡಿರುವ ಈ ಸಂಘಟನೆ ಈಗ ನ್ಯಾಯಾಂಗ ನಿಂದನೆಯನ್ನು ಎದುರಿಸಬೇಕಾಗುತ್ತದೆ’ ಎಂದು ನ್ಯಾಯಮೂರ್ತಿ ಎ.ಕೆ.ಜಯಶಂಕರನ್​ ನಂಬಿಯಾರ್​ ನೇತೃತ್ವದ ಪೀಠ ಹೇಳಿದೆ.

    ‘ಪಿಎಫ್‌ಐ ಮತ್ತು ಎಸ್‌ಡಿಪಿಐ ದೇಶಾದ್ಯಂತ ತೀವ್ರವಾದದ ಸಿದ್ಧಾಂತಗಳನ್ನು ಪ್ರಚುರ ಮಾಡುವುದರಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳಾಗಿವೆ. ಈ ಸಂಘಟನೆಗಳು ಭಾರತದ ಹೊರಗೆ ಸಹ ಬೇರುಗಳನ್ನು ಹೊಂದಿವೆ. ದಬ್ಬಾಳಿಕೆ ಮತ್ತು ಬೆದರಿಕೆಯ ಮೂಲಕ ಅವರು ಇತರ ಸಮುದಾಯದ ಜನರನ್ನು ಇಸ್ಲಾಂಗೆ ಮತಾಂತರಿಸುವಲ್ಲಿ ತೊಡಗಿದ್ದಾರೆ’ ಎಂದು ಕಳೆದ ಬಾರಿ ವಿಚಾರಣೆ ವೇಳೆ ನ್ಯಾಯಮೂರ್ತಿ ಕೆ. ಹರಿಪಾಲ್ ಅಭಿಪ್ರಾಯಪಟ್ಟಿದ್ದರು. (ಏಜೆನ್ಸೀಸ್​)

    ರಂಗೇರಿದ ಅಧ್ಯಕ್ಷ ಖುರ್ಚಿ ಫೈಟ್​: ಎರಡೂ ಹುದ್ದೆ ಇರಲಿ ಎಂದ ಸಿಎಂ ಗೆಹ್ಲೋಟ್​ಗೆ ಶಾಕ್​ ಕೊಟ್ಟ ರಾಹುಲ್​ಗಾಂಧಿ!

    ತಂದೆಯ ಆಸ್ತಿಯನ್ನು ಮಕ್ಕಳ ಸಹಿ ಇಲ್ಲದೇ ಮಾರಾಟ ಮಾಡಿದರೆ ಕಾನೂನಿನಡಿ ಇರುವ ಅವಕಾಶಗಳೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts