ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಶಾಸಕ ಹಾಗೂ ಸಂಸದ ಸ್ಥಾನಕ್ಕೆ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಹೊತ್ತ ಸ್ಯಾಂಡಲ್ವುಡ್ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ರಾಷ್ಟ್ರ ಜನಹಿತ ಪಕ್ಷ ಎಂಬ ಹೆಸರಿನ ಪಕ್ಷವೊಂದನ್ನು ಕಟ್ಟಿಕೊಂಡಿರುವ ವೀರೇಂದ್ರ ಬಾಬು ಅವರು ಎಂಎಲ್ಎ, ಎಂಪಿ ಸೀಟಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ. ವೀರೇಂದ್ರ ಅವರ ವಿರುದ್ಧ ಬಸವರಾಜ್ ಘೋಷಾಲ್ ಎನ್ನುವವರು ದೂರು ನೀಡಿದ್ದಾರೆ. ಸದ್ಯ ಇವರ ವಿರುದ್ಧ 1.88 ಕೋಟಿ ರೂಪಾಯಿ ವಂಚನೆ ಆರೋಪವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮೂರು ವರ್ಷಗಳ ಹಿಂದೆ ‘ಸ್ವಯಂ ಕೃಷಿ’ ಹೆಸರಲ್ಲಿ ಹತ್ತಾರು ಕಂಪೆನಿಗಳನ್ನು ಹುಟ್ಟುಹಾಕಿ, ಅನೇಕ ಜನರಿಗೆ ವಂಚನೆಯನ್ನು ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಆಗ ಹೈದರಾಬಾದ್ನಲ್ಲಿ ಪೊಲೀಸರು ವೀರೇಂದ್ರ ಬಾಬು ಅವರನ್ನು ಬಂಧಿಸಿದ್ದರು. ಇದೀಗ ಮತ್ತೆ ಅವರ ಮೇಲೆ ಕೋಟ್ಯಂತರ ರೂ. ಹಣ ವಂಚನೆ ಆರೋಪ ಕೇಳಿಬಂದಿದೆ.
ರಾಷ್ಟ್ರ ಜನಹಿತ ಪಕ್ಷ ಮಾತ್ರವಲ್ಲದೇ, ಕರ್ನಾಟಕ ರಕ್ಷಣಾ ಪಡೆ ಎಂಬ ಹೆಸರಿನ ಸಂಘಟನೆ ಕಟ್ಟಿ ಮೋಸ ಮಾಡಿರುವುದು ತಿಳಿದುಬಂದಿದೆ. ಈ ಸಂಘಟನೆಗೆ ತಾಲೂಕು ಹಾಗೂ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡುವುದಾಗಿ ಹಲವಾರು ಜನರಿಂದ ಹಣ ಪಡೆದು ವಂಚನೆ ಮಾಡಿರುವುದಾಗಿ ಹೇಳಲಾಗುತ್ತಿದೆ. ಈ ಹಣವನ್ನು ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುವುದಾಗಿ ಹೇಳಿಕೊಂಡಿದ್ದರು. ಆದರೆ ನಂತರ ಇವೆಲ್ಲಾ ಮೋಸದಾಟ ಎಂದು ತಿಳಿದುಬಂದಿದೆ.
ಅಂದಹಾಗೆ, ವೀರೇಂದ್ರ ಬಾಬು ಅವರು, 2011ರಲ್ಲಿ ಸ್ವಯಂ ಕೃಷಿ ಚಿತ್ರವನ್ನು ನಿರ್ಮಿಸಿ ನಟಿಸಿದ್ದಾರೆ. ಈ ವೀರೇಂದ್ರ ಬಾಬು ಜತೆ ತಮನ್ನಾ ಪಾಷಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅಂಬರೀಷ್, ಸುಮನ್ ಜಿಕೆ, ಚರಣ್ ರಾಜ್, ರೇಖಾ ವಿ.ಕುಮಾರ್, ಸತ್ಯಜಿತ್, ಉಮಾಶ್ರೀ, ರಂಘಾಯಣ ರಘು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.
ಮಾಡೆಲ್ನಂತಾಗಲು 4.5 ಕೋಟಿ ರೂ. ಖರ್ಚು ಮಾಡಿದಳು- ಮೊದಲಿನಂತಾಗಲು ಮತ್ತೆ ಸರ್ಜರಿ ಮಾಡಿಸಿದಳು!
ಡೊನಾಲ್ಡ್ ಟ್ರಂಪ್ ಮೊದಲ ಪತ್ನಿ, ಸುಪ್ರಸಿದ್ಧ ಮಾಡೆಲ್ ಇವಾನಾ ನಿಗೂಢ ಸಾವು: ಪೊಲೀಸರಿಂದ ತನಿಖೆ