More

    ಮುಂದುವರೆದಿದೆ ಬಿಜೆಪಿ ಮುಖಂಡರ ಮೇಲೆ ಶೂಟ್‌ಔಟ್‌: ಸಾವು-ಬದುಕಿನ ನಡುವೆ ಹೋರಾಡುತ್ತಿರುವ ನಾಯಕ

    ಪ್ರಯಾಗ್‌ರಾಜ್‌ (ಉತ್ತರ ಪ್ರದೇಶ): ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕ ಅವಧೀಶ್​ ಮೌರ್ಯಾ ಅವರಿಗೆ ದುಷ್ಕರ್ಮಿಗಳು ಗುಂಡು ಹೊಡೆದಿದ್ದರು. ಅದಕ್ಕೂ ಮುನ್ನ ಜಮ್ಮು-ಕಾಶ್ಮೀರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಿಜೆಪಿ ಮುಖಂಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದರ ಬೆನ್ನಲ್ಲೇ ಇದೀಗ ಉತ್ತರಪ್ರದೇಶದ ಇನ್ನೋರ್ವ ನಾಯಕ ಅಜಯ್​ ಶರ್ಮಾ (35) ಅವರ ಮೇಲೆ ಗುಂಡಿನ ದಾಳಿ ನಡೆದಿದೆ.

    ಪ್ರಯಾಗ್​ರಾಜ್​​ನಲ್ಲಿ ಗುಂಡಿನ ದಾಳಿಯಾಗಿದ್ದು, ಶರ್ಮಾ ಅವರ ಸ್ಥಿತಿ ಗಂಭೀರವಾಗಿದೆ. ಪ್ರಯಾಗ್​ರಾಜ್​​ನ ತ ತಮ್ಮ ಮನೆಯಲ್ಲಿ ಇರುವಾಗಲೇ ಈ ಗುಂಡಿನ ದಾಳಿ ನಡೆದಿದೆ. ಅವರ ಮೇಲೆ ದುಷ್ಕರ್ಮಿಗಳು 5 ಬಾರಿ ಗುಂಡು ಹಾರಿಸಿದ್ದಾರೆ. ಇದರಿಂದ ಅವರ ತೋಳು ಮತ್ತು ಹೊಟ್ಟೆಗೆ ಗಂಭೀರವಾಗಿ ಗಾಯಗಳಾಗಿವೆ. ಸ್ವರೂಪ್​​ ರಾಣಿ ನೆಹರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಅಜಯ್ ಶರ್ಮಾ ಬಿಜೆಪಿ ಜಿಲ್ಲಾ ಕಿಸಾನ್​ ಮೋರ್ಚಾದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಿನ್ನೆ ಕೆಲಸದ ನಿಮಿತ್ತ ಮನೆಯಿಂದ ಹೊರಹೋಗಿದ್ದಾಗ ಆರು ಮಂದಿ ಅವರನ್ನು ಸುತ್ತುವರಿದು ಹಲ್ಲೆ ನಡೆಸಲು ಮುಂದಾಗಿದ್ದರು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದಾರೆ ಶರ್ಮಾ. ಆದರೆ ಅವರನ್ನು ಬೆನ್ನಟ್ಟಿಕೊಂಡು ಕಾರು ಮತ್ತು ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಮನೆಯಲ್ಲಿಯೇ ಗುಂಡಿನ ದಾಳಿ ನಡೆಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಅಡಕೆ ಬೆಳೆಗಾರರಿಗೆ ಶಾಕ್‌ ನೀಡಿದ ಸಂಸದ- ಬ್ಯಾನ್‌ ಮಾಡಿ, ಜನರು ಸೇವಿಸದಂತೆ ನಿಷೇಧಿಸಿ ಎಂದು ಪ್ರಧಾನಿಗೆ ಪತ್ರ!

    VIDEO: ಕ್ಯಾನ್ಸರ್‌ಪೀಡಿತರಿಗಾಗಿ ಎರಡು ವರ್ಷ ಕೂದಲು ಬಿಟ್ಟು ದಾನ ಮಾಡಿದ ಮಾಧುರಿ ಪುತ್ರ: ವಿಡಿಯೋ ಶೇರ್‌ ಮಾಡಿದ ನಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts