More

    ಭಾರತೀಯ ಸೇನೆಯ ಭರ್ಜರಿ ಕಾರ್ಯಾಚರಣೆ: ಏಳು ಭಯಾನಕ ಉಗ್ರರ ಸೆರೆ ಹಿಡಿದ ಯೋಧರು

    ಶ್ರೀನಗರ: ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್​ಗೆ ಸೇರಿದ 7 ಮಂದಿ ಉಗ್ರರನ್ನು ವಶಕ್ಕೆ ಪಡೆದಿದೆ.

    ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನಿಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿರುವ ಭರ್ಜರಿ ಕಾರ್ಯಾಚರಣೆ ಇದಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ಪೊಲೀಸ್‍ ಪಡೆಗಳು ನಿನ್ನೆ ರಾತ್ರಿ ದಾಳಿ ನಡೆಸಿ, ಶೋಪಿಯಾನ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿದ್ದ ಹಿಜ್ಬುಲ್‍ ಮುಜಾಹಿದ್ದೀನ್‍ ಸಂಘಟನೆಯ ಏಳು ಸಹಚರರನ್ನು ಬಂಧಿಸಿವೆ ಎಂದು ಪೊಲೀಸರು ಹೇಳಿದ್ದಾರೆ.

    ಈಗ ಬಂಧನಕ್ಕೆ ಸಿಕ್ಕಿರುವ ಏಳೂ ಮಂದಿ ಸಹಚರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದರು. ಅವರಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದರು. ಉಗ್ರ ಸಂಘಟನೆಗಾಗಿ ಗ್ರೌಂಡ್ ವರ್ಕ್ ಮಾಡುವುದು ಇವರ ಕೆಲಸವಾಗಿತ್ತು ಎಂದು ಮೂಲಗಳು ಹೇಳಿವೆ.

    ಈ ಉಗ್ರರನ್ನು ವಶಕ್ಕೆ ಪಡೆದುಕೊಳ್ಳುವ ಜತೆಗೆ ಅವರಿಂದ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇವರ ಮೂಲಕ ಇನ್ನಷ್ಟು ಉಗ್ರರು ಸಿಕ್ಕಿಬೀಳುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

    ಕೃಷಿ ಸಂಬಂಧಿತ ಪದವೀಧರರಿಗೆ ಇಲ್ಲಿದೆ ಅವಕಾಶ: ಉನ್ನತ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಆ ಹುಡುಗಿ ಬೇಡ ಕಣೋ ಎಂದ್ರೂ ಕೇಳ್ದೆ ಮದ್ವೆಯಾಗಿ ಪಡಬಾರದ ಕಷ್ಟ ಪಡ್ತಿದ್ದೇನೆ- ಪ್ಲೀಸ್​ ಪರಿಹಾರ ಹೇಳಿ

    ಕಾಲು ಶತಮಾನದ ನಂತರ ಇತಿಹಾಸ ಬರೆದ ಕೇರಳದ ಮುಸ್ಲೀಂ ಲೀಗ್​- ಮಹಿಳೆಗೆ ಸಿಕ್ಕಿತು ಸ್ಥಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts