ಕೋಲ್ಕತ: ಕಳೆದ ಶನಿವಾರದಂದು ಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕತದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಲಘು ಹೃದಯಾಘಾತಕ್ಕೊಳಗಾಗಿ ಆಯಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿರುವ ಗಂಗೂಲಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಡಿಸ್ಚಾರ್ಜ್ ಆದನಂತರ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ಉತ್ತಮ ಚಿಕಿತ್ಸೆ ನೀಡಿದ ವುಡ್ಲ್ಯಾಂಡ್ ಆಸ್ಪತ್ರೆ ಹಾಗೂ ವೈದ್ಯರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ. ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಎಂದು ತಿಳಿಸಿದ್ದಾರೆ.
#WATCH | "I thank the doctors at the hospital for the treatment. I am absolutely fine," says BCCI President Sourav Ganguly after being discharged from Kolkata's Woodlands Hospital. pic.twitter.com/BUwsz5h1FQ
— ANI (@ANI) January 7, 2021
48 ವರ್ಷದ ಸೌರವ್ ಗಂಗೂಲಿ ಅವರಿಗೆ ಜನವರಿ 2 ಶನಿವಾರದಂದು ವ್ಯಾಯಾಮ ನಡೆಸುತ್ತಿದ್ದ ವೇಳೆ ಲಘು ಹೃದಯಾಘಾತ ಕಾಣಿಸಿಕೊಂಡಿತ್ತು. ಅವರ ಹೃದಯದ ರಕ್ತಾನಾಳಗಳಲ್ಲಿ ಬ್ಲಾಕ್ಗಳು ಕಂಡುಬಂದ ಕಾರಣ ಆಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು.
ನಿನ್ನೆಯಷ್ಟೇ ಇವರ ಆರೋಗ್ಯದ ಬಗ್ಗೆ ಮಾತನಾಡಿದ್ದ ಈ ಸಂದರ್ಭದಲ್ಲಿ ಮಾತನಾಡಿರುವ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ, ಸೌರವ್ ಗಂಗೂಲಿ ಅವರ ಹೃದಯ 20 ವರ್ಷದವರಿದ್ದಾಗ ಹೇಗಿದ್ದರೋ ಅಷ್ಟೇ ಆರೋಗ್ಯವಾಗಿದೆ. ಅವರು ಮ್ಯಾರಥಾನ್ ಓಡಬಹುದು, ವಿಮಾನ ಹಾರಾಟ ನಡೆಸಬಹುದು ಎಂದಿದ್ದರು.
ಈಗ ಲಘು ಹೃದಯಾಘಾತಕ್ಕೆ ಒಳಗಾಗಿದ್ದರಷ್ಟೇ. ಇದು ಸೌರವ್ ಗಂಗೂಲಿಯವರ ಜೀವನಶೈಲಿ ಅಥವಾ ಜೀವಿತಾವಧಿಯ ಮೇಲೆ ಪರಿಣಾಮ ಬೀರುವುದಿಲ್ಲ. ಅವರು ಬೇರೆಯವರಂತೆ ಸಾಮಾನ್ಯ ಜೀವನವನ್ನು ನಡೆಸಲಿದ್ದಾರೆ. ಕ್ರಿಕೆಟ್ಗೆ ಬೇಕಾದರೂ ಹಿಂದಿರುಗಬಹುದು. ಅವರು ಮನೆಗೆ ತಲುಪಿದ ಕೂಡಲೇ ಮನೆಯಿಂದ ಕೆಲಸ ಮಾಡಲು ಪ್ರಾರಂಭಿಸಬಹುದು ಎಂದು ದೇವಿ ಶೆಟ್ಟಿ ಹೇಳಿದ್ದರು.
ಆಸ್ಪತ್ರೆಗೆ ದಾಖಲಾಗಿರುವ ಸೌರವ್ ಗಂಗೂಲಿಯ ಹೃದಯ ಹೇಗಿದೆ? ಡಾ.ದೇವಿ ಶೆಟ್ಟಿ ಏನು ಹೇಳಿದರು ನೋಡಿ..
ಪತ್ನಿಗೊಂದು, ಆಕೆಗೊಂದು ಮನೆ: ಹೆಂಡ್ತಿ ಕೈಲೇ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೊಪ್ಪಳದ ಇಂಜಿನಿಯರ್!
ಓಡಿಹೋದವರ ಖಾಸಗಿ ಭಾಗ ಸುಟ್ಟು ಹತ್ಯೆ! ಪ್ರೇಮಿಗಳನ್ನು ಶಿಕ್ಷಿಸುವುದು ಗಂಭೀರ ಅಪರಾಧ ಎಂದ ಸುಪ್ರೀಂ