ಉಸಿರಾಟದ ಸಮಸ್ಯೆ: ರಾಷ್ಟ್ರಪತಿ ಪದಕ ಪುರಸ್ಕೃತ ನಿವೃತ್ತ ಎಸ್​ಪಿ ನೂರುಲ್ಲಾ ವಿಧಿವಶ

ಬೆಂಗಳೂರು: ದಕ್ಷ ಹಾಗೂ ಪ್ರಾಮಾಣಿಕ ಕರ್ತವ್ಯದಿಂದಾಗಿ ರಾಷ್ಟ್ರಪತಿ ಪದಕ, ಮುಖ್ಯಮಂತ್ರಿಗಳ ಚಿನ್ನದ ಪದಕ ಗಳಿಸಿ, ಅಪಾರ ಮೆಚ್ಚುಗೆ ಪಡೆದಿರುವ ನಿವೃತ್ತ ಎಸ್​ಪಿ ನೂರುಲ್ಲಾ ಷರೀಫ್ ಇಂದು ನಿಧನರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದವರಾದ ನೂರುಲ್ಲಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ ಉಸಿರಾಟದಲ್ಲಿ ಭಾರಿ ಏರುಪೇರಾಗಿ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ. 1987ರಿಂದ ಸತತ 33 ವರ್ಷಗಳ ಕಾಲ ರಾಜ್ಯದ ವಿವಿಧೆಡೆಗಳಲ್ಲಿ ನೂರುಲ್ಲಾ … Continue reading ಉಸಿರಾಟದ ಸಮಸ್ಯೆ: ರಾಷ್ಟ್ರಪತಿ ಪದಕ ಪುರಸ್ಕೃತ ನಿವೃತ್ತ ಎಸ್​ಪಿ ನೂರುಲ್ಲಾ ವಿಧಿವಶ