ಬೆಂಗಳೂರು: ಮಹಾಮಾರಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 7,8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮೂಂದೂಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.
ಮಾರ್ಚ್ 31ರ ನಂತರ ಕರೊನಾ ವೈರಸ್ ಪರಿಸ್ಥಿತಿಯನ್ನು ನೋಡಿಕೊಂಡು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ನಿಗದಿಪಡಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕರೊನಾ ಭೀತಿಯಿಂದ ಈಗಾಗಲೇ ಎಲ್.ಕೆ.ಜಿ ಮತ್ತು 1 ರಿಂದ 6ನೇ ತರಗತಿಯವರೆಗಿನ ಪರೀಕ್ಷೆಗಳನ್ನು ರದ್ದುಗೊಳಿಸಿ ಬೇಸಿಗೆ ರಜೆಯನ್ನು ಘೋಷಿಸಲಾಗಿದೆ. ಆಯಾ ತರಗತಿಗಳಲ್ಲಿ ಮಕ್ಕಳು ತೆಗೆದುಕೊಂಡ ಗ್ರೇಡ್ಗಳ ಆಧಾರದ ಮೇಲೆ ಮುಂದಿನ ತರಗತಿಗೆ ಉತ್ತೀರ್ಣರನ್ನಾಗಿ ಮಾಡಲು ಶಿಕ್ಷಣ ಇಲಾಖೆ ಆಯಾ ಶಾಲೆಗೆ ಸೂಚಿಸಿದೆ.
ಇನ್ನೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ಪೂರ್ವ ಸಿದ್ಧತೆ ಹೆಸರಿನಲ್ಲಿ ರಜೆಯನ್ನು ನೀಡಲಾಗಿದೆ. ವಿಧ್ಯಾರ್ಥಿಗಳು ಪರೀಕ್ಷೆಯ ದಿನ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಈ ವೇಳೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗದುಕೊಳ್ಳುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.
1ರಿಂದ 6ನೇ ತರಗತಿಯವರಿಗೆ ಬೇಸಿಗೆ ರಜೆ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯ: ಶಿಕ್ಷಣ ಇಲಾಖೆಯ ಹೊಸ ಸುತ್ತೋಲೆ
1- 6ನೇ ತರಗತಿ ಮಕ್ಕಳಿಗೆ ಮುಂದಿನ ವರ್ಗಕ್ಕೆ ಬಡ್ತಿ ನೀಡಿ ಆದೇಶ ಹೊರಡಿಸಿದ ಸರ್ಕಾರ