More

    ನಿಯೋಜಿತ ಶಿಕ್ಷಕರ ವರ್ಗಾವಣೆ ಸದ್ಯಕ್ಕಿಲ್ಲ: ಸುರೇಶ್‌ಕುಮಾರ್

    ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಮತ್ತು ಕಡ್ಡಾಯ ವರ್ಗಾವಣೆ ಹೊಂದಿದ ಶಿಕ್ಷಕರು ಮುಂದಿನ ಆದೇಶದವರೆಗೂ ಈಗ ಕಾರ್ಯ ನಿರ್ವಹಿಸುತ್ತಿರುವಲ್ಲೇ ಸೇವೆ ಮುಂದುವರಿಸಬೇಕಿದೆ.

    ಇದನ್ನೂ ಓದಿ: ಗುಜರಾತ್‌ನಿಂದ ಬಿಹಾರಕ್ಕೆ ಹೊರಟಿದ್ದ ರೈಲು ತಲುಪಿದ್ದು ಕರ್ನಾಟಕಕ್ಕೆ!

    ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಆದೇಶ ನೀಡಿದ್ದಾರೆ.

    ಶಿಕ್ಷಕರ ಹೊಸ ವರ್ಗಾವಣಾ ನಿಯಂತ್ರಣ ಕಾಯ್ದೆಯ ನಿಯಮಗಳು ರೂಪುಗೊಳ್ಳುತ್ತಿದ್ದು, ಈ ನಿಯಮಗಳ ಆಧಾರದಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ.

    ಇದನ್ನೂ ಓದಿ: ಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಪ್ರಕರಣ: ಆರೋಪಿ ಸಿಕ್ಕಿಬೀಳಲು ಆತನ ನಡೆಯೇ ಕಾರಣವಾಯ್ತು!

    ಹೀಗಾಗಿ ಪ್ರಸ್ತುತ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಈ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ವರ್ಗಾವಣೆಗೊಳಗಾದ ಮತ್ತು ವರ್ಗಾವಣೆ ಹಿನ್ನೆಲೆಯಲ್ಲಿ ಸೇವೆಯಿಂದ ಬಿಡುಗಡೆ ಹೊಂದದಿರುವ ಶಿಕ್ಷಕರನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಮುಂದಿನ ಆದೇಶದವರೆಗೆ ಮುಂದುವರಿಸುವಂತೆ ಸಚಿವರು ಸೂಚಿಸಿದ್ದಾರೆ.

    ತನ್ನ ದೇಶದ ನರಿಬುದ್ಧಿಯ ವಿರುದ್ಧವೇ ತಿರುಗಿಬಿದ್ದ ಚೀನಾ ಜನತೆ…!

    ರಾಜ್ಯೋತ್ಸವ ರಸಪ್ರಶ್ನೆ - 26

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts