ಶ್ರೀನಗರ: ಕರೊನಾ ವೈರಸ್, ರೂಪಾಂತರಿ ಕರೊನಾ ಏನೇ ಇದ್ದರೂ ಗಡಿಭಾಗದಲ್ಲಿ ಉಗ್ರರ ಕಾಟ ಮಾತ್ರ ತಪ್ಪುತ್ತಿಲ್ಲ. ಅನಧಿಕೃತವಾಗಿ ಭಾರತದೊಳಗೆ ನುಸುಳುವ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಭಾರತೀಯ ಯೋಧರು ಅವರಿಗೆ ತಕ್ಕ ಉತ್ತರ ನೀಡುತ್ತಲಿದ್ದಾರೆ.
ಇಂದು ನಡೆದ ಎನ್ಕೌಂಟರ್ನಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಶ್ರೀನಗರದ ಲಾವಾಪೋರಾ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ. ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಉಗ್ರರ ಅಡಗುದಾಣದ ಸಮೀಪ ಹೋದಾಗ, ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ಪ್ರತಿಯಾಗಿ ಸೇನೆ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹೀಗೆ ರಾತ್ರಿಯಿಂದ ಬೆಳಗಿನಜಾವದವರೆಗೆ ಎನ್ಕೌಂಟರ್ ನಡೆದಿದೆ.
ಇದರಲ್ಲಿ ಮೂವರು ಉಗ್ರರು ಸಾವಿಗೀಡಾಗಿದ್ದಾರೆ. ಎನ್ಕೌಂಟರ್ ಪ್ರಕ್ರಿಯೆ ಇನ್ನೂ ಮುಂದುವರೆದಿರುವುದಾಗಿ ಸೇನೆ ಹೇಳಿದೆ.
ಮಾವಂದಿರು ಕೊಡುವ ಜಮೀನಿಗೆ ಅವರ ಮಕ್ಕಳಿಂದ ತಕರಾರು ಬರದಿರಲು ಏನು ಮಾಡಬೇಕು?
ಇವ್ನು ನನ್ನ ಗಂಡ… ಇವ್ನು ನನ್ನ ಗಂಡ… ಒಬ್ಬನಿಗಾಗಿ ಅಕ್ಕ-ತಂಗಿ ಕಿತ್ತಾಟ: ಪೊಲೀಸರಿಗೆ ತಲೆನೋವು!
ಮಹಿಳೆಯೊಬ್ಬರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ ಅಮಿತಾಭ್: ಅದಕ್ಕೆ ಕಾರಣ ಒಂದು ಕವನ…