More

    ಪೂಜೆಗೆಂದು ಹೋದವರು ಮಸಣ ಸೇರಿದರು! ಮಂಡ್ಯದಲ್ಲಿ ಭೀಕರ ಅಪಘಾತ- ಐವರಿಗೆ ಗಂಭೀರ ಗಾಯ

    ಮಂಡ್ಯ: ಟ್ಯಾಕ್ಟರ್ ಪಲ್ಟಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬಿರುವಹಳ್ಳಿ ಗ್ರಾಮದ ಬಳಿ ನಡೆದಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೆ.ಆರ್.ಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ​ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ‌ರಮೇಶ್ (44) ಮತ್ತು ಧ್ರುವ (11) ಮೃತಪಟ್ಟವರು. ಶ್ರೀ ಚಂದಗೋಳಮ್ಮ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ವಾಪಸ್‌ ತೆರಳುವಾಗ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್‌ನಲ್ಲಿ ಏಳು ಜನರು ಪ್ರಯಾಣಿಸುತ್ತಿದ್ದರು.

    ಚಾಲಕನ ಅಜಾಗರೂಕತೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಕೆ.ಆರ್.ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. (ದಿಗ್ವಿಜಯ ನ್ಯೂಸ್‌)

    ಮ್ಯಾಟ್ರಿಮೋನಿ ಸೈಟ್‌ನಿಂದ ಪರಿಚಯ, ಮದ್ವೆ ಬಳಿಕ ಚಿನ್ನಾಭರಣದೊಂದಿಗೆ ಎಸ್ಕೇಪ್‌- ಹಲವರ ‘ಪತಿ’ ಈತ!

    ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಹೇಗೆ? ಯಾವ್ಯಾವುದಕ್ಕೆ, ಎಷ್ಟು ದಿನ ಬ್ರೇಕ್‌? ಅಪಾರ್ಟ್‌ಮೆಂಟ್‌ಗಳಿಗೇನು ರೂಲ್ಸ್‌?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts