ಉದಯಪುರ (ರಾಜಸ್ಥಾನ): ನನ್ನ ಪತಿಯನ್ನು ಕ್ರೂರವಾಗಿ ಕೊಂದವರನ್ನು ಸುಮ್ಮನೇ ಬಿಡಬೇಡಿ. ಅವರನ್ನು ಗಲ್ಲಿಗೇರಿಸಿ ಎಂದು ಟೈಲರ್ ಕನ್ಹಯ್ಯಲಾಲ್ ಅವರ ಪತ್ನಿ ಜಶೋದಾ ಕಣ್ಣೀರಿಟ್ಟಿದ್ದಾರೆ.
ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಾರಣಕ್ಕೆ, ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಲಾಲ್ ಅವರ ಶಿರಚ್ಛೇದ ಮಾಡಿ ಅದರ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಇಬ್ಬರು ಕ್ರೂರಿಗಳನ್ನು ಇದಾಗಲೇ ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಕನ್ಹಯ್ಯಾ ಅವರ ಪತ್ನಿ ಕೋರಿಕೊಂಡಿದ್ದಾರೆ.
ಕನ್ಹಯ್ಯಲಾಲ್ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಜಶೋಧಾ ಅವರು, ಹಂತಕರಿಗೆ ಮರಣದಂಡನೆ ವಿಧಿಸಿ, ನಮಗೆ ನ್ಯಾಯ ಒದಗಿಸಿ ಎಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಬಳಿಕ ನನ್ನ ಪತಿಗೆ ಬೆದರಿಕೆ ಕರೆಗಳು ಬರುತ್ತಿದ್ದವು. ಆದ್ದರಿಂದ ಅವರು ಕೆಲಸಕ್ಕೆ ಹೋಗಿರಲಿಲ್ಲ. ಆದರೆ ಕೆಲಸ ಮಾಡುವುದು ಅನಿವಾರ್ಯವಾಗಿ ನಿನ್ನೆ ಮಂಗಳವಾರ ಹೋಗಿದ್ದರು. ಅದೇ ದಿನ ಈ ಹತ್ಯೆ ನಡೆದಿದೆ ಎಂದು ಬಿಕ್ಕಿಬಿಕ್ಕಿ ಅತ್ತರು.
ಆರೋಪಿ ರಿಯಾಜ್, ಕನ್ನಯ್ಯಲಾಲ್ ಅವರ ಕತ್ತನ್ನು ಕತ್ತರಿಸಿದ್ದು, ಮತ್ತೊಬ್ಬ ಆರೋಪಿ ಈ ದೃಶ್ಯವನ್ನು ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಈ ಕೊಲೆಯನ್ನು ತಾವೇ ಮಾಡಿದ್ದಾಗಿ ಹೇಳಿರುವ ವಿಡಿಯೊಯೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದು, ಇಬ್ಬರೂ ಈಗ ಅರೆಸ್ಟ್ ಆಗಿದ್ದಾರೆ.
ಶಿರಚ್ಛೇದನ ಮಾಡಿದವರಿಗೆ ಐಸಿಸ್ ನಂಟು? ಮೃತ ಟೈಲರ್ ಕುಟುಂಬಕ್ಕೆ 31 ಲಕ್ಷ ರೂ. ಪರಿಹಾರ- ಇಬ್ಬರಿಗೆ ಉದ್ಯೋಗ
ಕಲ್ಲಂಗಡಿ ಒಡೆದಾಗ ಗಡಿಪಾರು ಮಾಡು ಎಂದ ಬುದ್ಧಿಜೀವಿಗಳೇ, ರುಂಡ ಕತ್ತರಿಸಿದ್ದಾರೆ… ಬಾಯಿ ಮುಚ್ಚಿಕೊಂಡಿರುವಿರೇಕೆ?