ಮುರ್ಷಿದಾಬಾದ್: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ರೈಲು ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ತೃಣಮೂಲ ಕಾಂಗ್ರೆಸ್ನ ಕಾರ್ಮಿಕ ಸಚಿವ ಜಾಕೀರ್ ಹುಸೇನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿಟಾ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಜಾಕೀರ್ ಹುಸೇನ್ ರಾತ್ರಿ 10 ಗಂಟೆ ಸುಮಾರಿಗೆ ಕೋಲ್ಕತಾಕ್ಕೆ ತೆರಳಲು ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ನಿಲ್ದಾಣದ 2 ನೇ ಪ್ಲಾಟ್ಫಾರ್ಮ್ನಲ್ಲಿ ಕಾಯುತ್ತಿದ್ದ ವೇಳೆಯಲ್ಲಿ ಬಾಂಬ್ ಸ್ಫೋಟವಾಗಿದೆ.
ಸಚಿವ ಜಾಕೀರ್ ಮತ್ತು ಬೆಂಬಲಿಗರರನ್ನು ಟಾರ್ಗೆಟ್ ಮಾಡಿಕೊಂಡು ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಸಚಿವ ಜಾಕೀರ್ ಹುಸೇನ್ ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಮುರ್ಷಿದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಕಾಲು ಮತ್ತು ಕಿಬ್ಬೊಟ್ಟೆಗೆ ಗಾಯವಾಗಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ.
#WATCH: WB Minister Jakir Hossain injured after unidentified persons hurled a bomb at him at Nimtita railway station, Murshidabad y'day.
Murshidabad Medical College Superintendent says that he's stable & out of danger, one hand & leg injured.
(Amateur video, source unconfirmed) pic.twitter.com/ih7DLHAWLq
— ANI (@ANI) February 18, 2021
ಗಾಯಾಳುಗಳನ್ನು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆರಂಭಿಕ ಚಿಕಿತ್ಸೆಯ ನಂತರ ಅವರನ್ನು ಕೋಲ್ಕತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಈ ಸ್ಫೋಟ ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ದಾಳಿಯನ್ನು ತೀವ್ರವಾಗಿ ಖಂಡಿಸಲಾಗಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಬಿಜೆಪಿಯ ಬಂಗಾಳ ಅಭಿಯಾನದ ಪ್ರಧಾನ ಮುಖವಾಗಿರುವ ಮಾಜಿ ಟಿಎಂಸಿ ನಾಯಕ ಸುವೆಂದು ಅಧಿಕಾರಿ ಘಟನೆಯನ್ನು ಖಂಡಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಕೂಡ ಈ ದಾಳಿಯನ್ನು ಖಂಡಿಸಿದ್ದು, ಕೂಡಲೇ ಅಪರಾಧಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ನಡುರಸ್ತೆಯಲ್ಲಿಯೇ ವಕೀಲ ದಂಪತಿಯ ಬರ್ಬರ ಹತ್ಯೆ: ವಿಡಿಯೋದಲ್ಲಿ ಭಯಾನಕ ದೃಶ್ಯ ದಾಖಲು
ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಕ್ಯಾಪ್ಟನ್ ಸತೀಶ್ ಶರ್ಮಾ ನಿಧನ
ಶಾಲೆಯ ಮೇಲೆ ಬಂದೂಕುಧಾರಿಗಳಿಂದ ದಾಳಿ- 40 ಮಂದಿ ಶಿಕ್ಷಕರು, ವಿದ್ಯಾರ್ಥಿಗಳ ಅಪಹರಣ!