ನವದೆಹಲಿ: 2019 ಫೆಬ್ರವರಿ 26ರಂದು ಬಾಲಾಕೋಟ್ ವಾಯುದಾಳಿಯನ್ನು ಯಾರೂ ಮರೆಯುವುದಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದಂಥ ಘನಘೋರ ಕಾಳಗವದು. ಆ ಸಂದರ್ಭದಲ್ಲಿ ಅಭಿನಂದನ್ ಅವರು ಪಾಕಿಸ್ತಾನದ ಎಫ್ -16 (F-16) ಯುದ್ಧ ವಿಮಾನವನ್ನು ಹೊಡೆದುರುಳಿಸಲು ಯಶಸ್ವಿಯಾಗಿದ್ದರು. ಆದರೆ ಅಚಾನಕ್ಕಾಗಿ ಅವರು ಪಾಕಿಸ್ತಾನದ ನೆಲದ ಮೇಲೆ ಹೋಗಿ ಬಿದ್ದರು.
ಪಾಕಿಸ್ತಾನದ ಸೈನಿಕರ ಕೈಗೆ ಸಿಲುಕಿದ್ದ ವರ್ಧಮಾನ್ ಅವರ ದೇಹ ರಕ್ತಸಿಕ್ತವಾಗಿತ್ತು. ಸೈನಿಕರು ಇವರನ್ನು ಹಿಡಿದು ಚಿತ್ರಹಿಂಸೆಯನ್ನೂ ಕೊಟ್ಟಿದ್ದು ಮಾತ್ರವಲ್ಲದೇ ಈ ಸಂಬಂಧ ವಿಡಿಯೋ ಒಂದನ್ನು ಬಿಡುಗಡೆ ಮಾಡಿತ್ತು. ಆ ವಿಡಿಯೋದಲ್ಲಿ ಅಭಿನಂದನ್ ಅವರ ಕಣ್ಣಿಗೆ ಬಟ್ಟೆಕಟ್ಟಲಾಗಿತ್ತು. ಈ ವೇಳೆ ಪಾಕಿಸ್ತಾನದ ಸೇನಾಧಿಕಾರಿಗಳು ಕೆಲವು ಪ್ರಶ್ನೆ ಕೇಳಿದಾಗ ಅಭಿನಂದನ್ ತಾಳ್ಮೆಯಿಂದಲೇ ಉತ್ತರಿಸಿದ್ದುದು ಕಂಡುಬಂತ್ತು. ಆದರೆ ಪಾಕಿಸ್ತಾನದ ಮೇಲೆ ಭಾರತ ಜಾಗತಿಕವಾಗಿ ಒತ್ತಡ ಹೇರಿದ್ದರಿಂದ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸುವುದು ಪಾಕಿಸ್ತಾನಕ್ಕೆ ಅನಿವಾರ್ಯವಾಗಿತ್ತು. ಭಾರತದ ಧೀರಪುತ್ರನೊಬ್ಬ ಸುರಕ್ಷಿತವಾಗಿ ತಾಯ್ನಾಡು ಸೇರಿದ್ದರು.
ಇವರಿಗೆ ಇಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಇಂದು ಪ್ರತಿಷ್ಠಿತ ‘ವೀರ ಚಕ್ರ ಪ್ರಶಸ್ತಿ’ ಪ್ರದಾನ ಮಾಡಿದ್ದಾರೆ. ವಿಂಗ್ ಕಮಾಂಡರ್ ಆಗಿದ್ದ ವರ್ತಮಾನ್ ಇತ್ತೀಚೆಗೆ ಭಾರತೀಯ ವಾಯುಪಡೆಯ ಏಸ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿ ಪಡೆದಿದ್ದರು.
ಭಾರತೀಯ ವಾಯುಪಡೆಯಲ್ಲಿರುವ ಮಿಗ್-21 ವಿಮಾನಗಳು 1960ರ ದಶಕದ ಮಾಡೆಲ್ಗಳು. ಅವನ್ನು ಭಾರತ ಮೇಲ್ದರ್ಜೆಗೇರಿಸಿ ಇನ್ನೂ ಬಳಸುತ್ತಿದೆ. ಆದರೆ ಪಾಕಿಸ್ತಾನದ ಬತ್ತಳಿಕೆಯಲ್ಲಿರುವ ಎಫ್-16 ಅತ್ಯಾಧುನಿಕ ಸೌಲಭ್ಯ ಹೊಂದಿದ ವಿಮಾನಗಳು. ಅಂತಹ ವಿಮಾನವನ್ನೇ ಅಭಿನಂದನ್ ಅವರು ಹೊಡೆದುರುಳಿಸಿದ್ದು ಭಾರಿ ಶ್ಲಾಘನೆಗೆ ಕಾರಣವಾಗಿತ್ತು. ಪಾಕಿಸ್ತಾನದ ಅತ್ಯಾಧುನಿಕ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ಅವರು ಮಾಡಿದ್ದು ವಿಶ್ವದಾಖಲೆ ಎಂದು ನಿವೃತ್ತ ವಾಯುಪಡೆ ಅಧಿಕಾರಿಗಳು ಬಣ್ಣಿಸಿದ್ದರು.
Delhi: Wing Commander (now Group Captain) Abhinandan Varthaman being accorded the Vir Chakra by President Ram Nath Kovind, for shooting down a Pakistani F-16 fighter aircraft during aerial combat on February 27, 2019. pic.twitter.com/CsDC0cYqds
— ANI (@ANI) November 22, 2021
ಮೂರನೆಯ ಮದುವೆಗೆ ಆಮೀರ್ ರೆಡಿ- ಅಧಿಕೃತ ಘೋಷಣೆಯೊಂದೇ ಬಾಕಿ? ಮಗಳ ವಯಸ್ಸಿನವಳಾ?
ಏರ್ಟೆಲ್ ಗ್ರಾಹಕರಿಗೆ ಬಿಗ್ ಶಾಕ್- ಶೇ.20-25ರಷ್ಟು ಹೆಚ್ಚಾಯ್ತು ಕಾಲಿಂಗ್, ಡೇಟಾ ದರಗಳು!