More

    ಸಿದ್ದರಾಮಯ್ಯ ಪುತ್ರನಿಗೂ ಕರೊನಾ ಸೋಂಕು ದೃಢ

    ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೂರು ದಿನಗಳ ಹಿಂದಷ್ಟೇ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆನ್ನಲ್ಲೇ ಇದೀಗ ಅವರ ಪುತ್ರ ಡಾ.ಯತೀಂದ್ರ ಅವರಿಗೂ ಸೋಂಕು ತಗುಲಿದೆ.

    ಈ ಕುರಿತು ಟ್ವೀಟ್‌ ಮಾಡಿರುವ ಡಾ.ಯತೀಂದ್ರ ಸಿದ್ದರಾಮಯ್ಯ, ನನ್ನ ಕರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿರುವುದಾಗಿ ಹೇಳಿದ್ದಾರೆ. ಜತೆಗೆ, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

    ಯತೀಂದ್ರ ಅವರು ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಸಿದ್ದರಾಮಯ್ಯ ಅವರು ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಅಮೆರಿಕದ ಕಂಪನಿಗಿಂತ ಹತ್ತು ಪಟ್ಟು ಕಡಿಮೆ ಬೆಲೆಗೆ ಕರೊನಾ ಲಸಿಕೆ ನೀಡಲಿದೆ ಭಾರತೀಯ ಸಂಸ್ಥೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts