More

    ಗೋವಿಂದುಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರಾ ಜೈಜಗದೀಶ್? … ಆಡಿಯೋ ಕ್ಲಿಪ್ ಸಮೇತ ಪೊಲೀಸ್ ಆಯುಕ್ತರಿಗೆ ಲಿಖಿತ ದೂರು

    ಹಿರಿಯ ನಿರ್ಮಾಪಕ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಾ.ರಾ. ಗೋವಿಂದು ಅವರು ನಟ-ನಿರ್ದೇಶಕ ಜೈಜಗದೀಶ್ ವಿರುದ್ಧ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ದೂರು ನೀಡಿದ್ದಾರೆ. ಜೈಜಗದೀಶ್ ತಮ್ಮ ತೇಜೋವಧೆ ಮಾಡಿದ್ದಲ್ಲದೆ, ತಮ್ಮ ಮಾನಸಿಕ ನೆಮ್ಮದಿಯನ್ನು ಹಾಳು ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಗೋವಿಂದು ಆಗ್ರಹಿಸಿದ್ದಾರೆ.

    ಲಾಕ್‌ಡೌನ್ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯಕ್ಕಾಗಿ ಒಂದಿಷ್ಟು ಕೆಲಸಗಳನ್ನು ಮಾಡಿದ್ದರು ಸಾ.ರಾ. ಗೋವಿಂದು. ಈ ಕುರಿತು ಜೈಜಗದೀಶ್ ಅವರು ಟೀಕೆ ಮಾಡಿದ್ದ ಆಡಿಯೋ ಕ್ಲಿಪ್‌ವೊಂದು ಇತ್ತೀಚೆಗೆ ಸಾಕಷ್ಟು ವೈರಲ್ ಆಗಿತ್ತು. ಇದರಿಂದ ಬೇಸರಗೊಂಡಿರುವ ಸಾ.ರಾ. ಗೋವಿಂದು ಅವರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಲಿಖಿತ ದೂರು ನೀಡಿದ್ದಾರೆ. ಅಷ್ಟೇ ಅಲ್ಲ, ಜೈಜಗದೀಶ್ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ.

    ‘ಜೈಜಗದೀಶ್ ಅವರು ನನ್ನ ಮತ್ತು ನನ್ನ ಸ್ನೇಹಿತರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ತೀರಾ ಕೆಳಮಟ್ಟದಲ್ಲಿ ಮಾತನಾಡಿದ್ದಾರೆ, ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಿಂದಿಸಿರುವ ಸಂಭಾಷಣೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ನನ್ನ ತೇಜೋವಧೆ ಮಾಡಿದ್ದು, ಇದರಿಂದ ನಾನು ಇಷ್ಟು ವರ್ಷ ಸಂಪಾದಿಸಿದ ಮಾನ-ಮರ್ಯಾದೆ ಹಾಳಾಗಿದೆ. ಇದರಿಂದ ನನ್ನ ಕುಟುಂಬಸ್ಥರು, ಹಿತೈಷಿಗಳು ಮತ್ತು ಸಹೋದ್ಯೋಗಿಗಳು ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಇದಕ್ಕೆಲ್ಲಾ ಕಾರಣ ಜೈಜಗದೀಶ್. ಅವರು ಉದ್ದೇಶಪೂರ್ವಕವಾಗಿ ನನಗೆ ತೇಜೋವಧೆ, ಮಾನನಷ್ಟ, ಮಾನಸಿಕ ನೆಮ್ಮದಿ ಹಾಳು ಮಾಡಿದ್ದಕ್ಕಾಗಿ ಅವರ ವಿರುದ್ಧ ಕೂಡಲೇ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸುತ್ತೇನೆ’ ಎಂದು ಸಾ.ರಾ. ಗೋವಿಂದು ಪತ್ರದಲ್ಲಿ ಬರೆದಿದ್ದಾರೆ. ಅಷ್ಟೇ ಅಲ್ಲ, ಜೈಜಗದೀಶ್ ಅವರದ್ದನ್ನೆಲಾದ ಆಡಿಯೋ ಕ್ಲಿಪ್ ದಾಖಲೆಯಾಗಿ ನೀಡಿದ್ದಾರೆ.

    ಅಮ್ಮ ನನ್ನ ಕರೀತಿದ್ದಾಳೆ … ಇರ್ಫಾನ್​ ಖಾನ್ ಕೊನೆಯ ಮಾತುಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts