More

    ಕಮ್ಮಾರಗಟ್ಟೆ ಆಂಜನೇಯಸ್ವಾಮಿ ಜಾತ್ರೆ ರದ್ದು

    ಸಾಸ್ವೆಹಳ್ಳಿ: ಹೊನ್ನಾಳಿ ತಾಲೂಕು ಕಮ್ಮಾರಗಟ್ಟೆ ಗ್ರಾಮದಲ್ಲಿ ಜು.25ರಂದು ನಡೆಯಬೇಕಿದ್ದ ಶ್ರೀ ಆಂಜನೇಯಸ್ವಾಮಿ ಕಾರ್ಣಿಕ ಮತ್ತು ಜಾತ್ರಾ ಮಹೋತ್ಸವವನ್ನು ಕೋವಿಡ್-19 ಕಾರಣದಿಂದ ಈ ಬಾರಿ ರದ್ದುಗೊಳಿಸಲಾಗಿದೆ.

    ಕಮ್ಮಾರಗಟ್ಟೆಯಲ್ಲಿ ಶ್ರಾವಣ ಮಾಸದ ಗರುಡ ಪಂಚಮಿಯ, ಹೆಳವನಕಟ್ಟೆ ಗಿರಿಯಮ್ಮನ ಪುಣ್ಯ ತಿಥಿಯಂದು ಪ್ರತಿ ವರ್ಷ ನೆರವೇರುತ್ತಿದ್ದ ಕಾರ್ಣಿಕ ಮತ್ತು ಜಾತ್ರಾ ಮಹೋತ್ಸವ ನಡೆಯುತ್ತದೆ. ಕರೊನಾ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ಈ ಬಾರಿ ಸರ್ಕಾರದ ಮಾರ್ಗಸೂಚಿಯಂತೆ ನಿಷೇಧಿಸಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts