ಜೈಪುರ: ರಾಜಸ್ಥಾನ ರಾಜಕೀಯ ಈಗ ಕೋರ್ಟ್ ಅಂಗಳದಲ್ಲಿದೆ. ಸಚಿನ್ ಪೈಲಟ್ ಮತ್ತು ಬೆಂಬಲಿಗ ಶಾಸಕರ ಅನರ್ಹತೆ ಸಂಬಂಧ ಹೈಕೋರ್ಟ್ ನೀಡಿದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸ್ಪೀಕರ್ ಸಿಪಿ ಜೋಶಿ ಸಲ್ಲಿಸಿರುವ ಅರ್ಜಿ ವಿಚಾರಣೆ ಜುಲೈ 27ರಂದು ನಡೆಯಲಿದೆ.
ಸ್ಪೀಕರ್ ಸಿಪಿ ಜೋಶಿ ತಮಗೆ ಸಂವಿಧಾನಬದ್ಧವಾಗಿ ಲಭ್ಯವಿರುವ ಅಧಿಕಾರ ಬಳಸದಂತೆ ಹೈಕೋರ್ಟ್ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ನಿನ್ನೆ ಈ ಸಂಬಂಧ ವಿಚಾರಣೆ ನಡೆದಿದ್ದು, ಸ್ಪೀಕರ್ ಪ್ರೊಸೀಡಿಂಗ್ಸ್ನಲ್ಲಿ ಕೋರ್ಟ್ ಹಸ್ತಕ್ಷೇಪ ಮಾಡಬಹುದೇ ಅಥವಾ ಮಾಡಬಾರದಾ ಎಂಬ ಬಗ್ಗೆ ಮಾತ್ರ ತಾನು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿತ್ತು.
ಇದನ್ನೂ ಓದಿ: ರಾಜಸ್ಥಾನ ರಾಜಕೀಯ: ಮೌನ ಮುರಿದ ರಾಹುಲ್ ಗಾಂಧಿ!
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್.ಗವಾಯಿ, ಕೃಷ್ಣ ಮುರಾರಿ ಅವರನ್ನು ಒಳಗೊಂಡ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ. ರಾಜಸ್ಥಾನ ರಾಜಕೀಯ ಈಗ ಇನ್ನಷ್ಟು ಕುತೂಹಲಕಾರಿ ಘಟ್ಟ ತಲುಪಿದ್ದು, ಅನೇಕ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ. (ಏಜೆನ್ಸೀಸ್)
ರಾಜಸ್ಥಾನ ರಾಜಕೀಯ: ಯಥಾಸ್ಥಿತಿ ಕಾಪಾಡಲು ಸ್ಪೀಕರ್ಗೆ ಹೈಕೋರ್ಟ್ ನಿರ್ದೇಶನ