ಕೊಯಂಬತ್ತೂರು: ನಟ, ಕರ್ನಾಟಕ ರತ್ನ, ಪವರ್ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ದೈಹಿಕವಾಗಿ ಅಗಲಿದ್ದರು ಮಾನಸಿಕವಾಗಿ ಅಭಿಮಾನಿಗಳ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರಿದ್ದಾರೆ. ಪುನೀತ್ ರಾಜ್ಕುಮಾರ್ ಅವರನ್ನು ಅವರ ಅಭಿಮಾನಿಗಳು ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಆರಾಧಿಸುತ್ತಾರೆ. ರಾಜ್ಯ, ದೇಶ, ವಿದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರನ್ನು ಜನ ಸ್ಮರಿಸಿಕೊಳ್ಳುತ್ತಾರೆ. ಇದೀಗ ಪುನೀತ್ ರಾಜ್ಕುಮಾರ್ ಅವರನ್ನು ನೆನಸಿಕೊಂಡು ಸದ್ಗುರು ಜಗ್ಗಿ ವಾಸುದೇವ ಅವರು ಭಾವುಕರಾಗಿದ್ದಾರೆ.
ಮಹಾಶಿವರಾತ್ರಿ ಪ್ರಯುಕ್ತ ಇಶಾ ಫೌಂಡೇಶನ್ ವತಿಯಿಂದ ಕೊಯಂಬತ್ತೂರಿನಲ್ಲಿ ವಿಶೇಷ ಕಾರ್ಯಕ್ರವನ್ನು ಆಯೋಜಿಸಲಾಗಿತ್ತು. ಖ್ಯಾತ ಸಿನಿ ತಾರೆಯರು, ಗಾಯಕರು ಸೇರಿದಂತೆ ಅನೇಕರು ನೆರದಿದ್ದ ಜನರನ್ನು ರಂಜಿಸಿದ್ದಾರೆ. ಈ ವೇಳೆ ಸದ್ಗುರು ಜಗ್ಗಿ ವಾಸುದೇವ ಅವರು ಪವರ್ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರನ್ನು ನೆನೆದು ಹಾಡನ್ನು ಹಾಡಿದ್ದು ವೇದಿಕೆ ಮೇಲೆ ಭಾವುಕರಾಗಿದ್ದಾರೆ.
ಕಾವೇರಿ ಕಾಲಿಂಗ್ ಅಭಿಯಾನಕ್ಕಾಗಿ ರಚಿಸಿದ್ದ ಹಾಡನ್ನು ಪುನೀತ್ ರಾಜ್ಕುಮಾರ್ ಅವರು ಹಾಡಿದ್ದರು ಮತ್ತು ಅಭಿಯಾನವನ್ನು ಬೆಂಬಲಿಸುವಂತೆ ಕರೆ ನೀಡಿದ್ದರು. ಇಂದು ಅವರು ನಮ್ಮೊಂದಿಗೆ ಇಲ್ಲ ಎಂದು ಹಾಡಲು ಶುರು ಮಾಡಿದ ಸದ್ಗುರು ಹಾಗೂ ಗಾಯಕ ಶಂಕರ್ ಮಹಾದೇವನ್ ಪುನೀತ್ ರಾಜ್ಕುಮಾರ್ ಅವರನ್ನು ನೆನೆದು ವೇದಿಕೆ ಮೇಲೆ ಭಾವುಕರಾಗಿದ್ದಾರೆ. ಈ ವಿಡಿಯೋ ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ.