ಭೋಪಾಲ್: ಮಧ್ಯಪ್ರದೇಶದ ಭೋಪಾಲದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಆರೋಗ್ಯದಲ್ಲಿ ಏರುಪೇರಾಗಿದೆ. ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಅವರು ಏಕಾಏಕಿ ಪ್ರಜ್ಞಾಶೂನ್ಯರಾಗಿ ಬಿದ್ದಿದ್ದಾರೆ.
ಇತ್ತೀಚೆಗಷ್ಟೇ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಲು ದೆಹಲಿಯ ಏಮ್ಸ್ಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಂದ ಬಳಿಕ ಇಂದು, ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವೊಂದರ ಉದ್ಘಾಟನೆಗಾಗಿ ಆಗಮಿಸಿದ್ದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಆರೋಗ್ಯ ಅಲ್ಲಿಯೇ ಹದಗೆಟ್ಟಿದೆ. ಎಚ್ಚರ ತಪ್ಪಿ ಬಿದ್ದಿದ್ದಾರೆ. ನಂತರ ಸಮಾರಂಭದಲ್ಲಿ ಭಾಗವಹಿಸಿದ್ದ ಜನರು ಸಾಧ್ವಿ ಪ್ರಜ್ಞಾ ಅವರನ್ನು ಖುರ್ಚಿಯ ಮೇಲೆ ಕೂರಿಸಿ, ಆರೈಕೆ ಮಾಡಿದ್ದಾರೆ. (ಏಜೆನ್ಸೀಸ್)
ಟ್ರಂಪ್ ಸರ್ಕಾರದ ನಿರ್ಧಾರದಿಂದ ಭಾರತದ ಐಟಿ ಕಂಪನಿಗಳಿಗೆ ಹೊಡೆತ: ಹೆಚ್ಚಲಿದೆ ನಿರುದ್ಯೋಗ