More

    ಕಾರ್ಯಕ್ರಮವೊಂದರಲ್ಲಿ ಪ್ರಜ್ಞಾಶೂನ್ಯರಾಗಿ ಬಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್​ ಠಾಕೂರ್​

    ಭೋಪಾಲ್​: ಮಧ್ಯಪ್ರದೇಶದ ಭೋಪಾಲದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್​ ಠಾಕೂರ್​ ಆರೋಗ್ಯದಲ್ಲಿ ಏರುಪೇರಾಗಿದೆ. ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಅವರು ಏಕಾಏಕಿ ಪ್ರಜ್ಞಾಶೂನ್ಯರಾಗಿ ಬಿದ್ದಿದ್ದಾರೆ.

    ಇತ್ತೀಚೆಗಷ್ಟೇ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಲು ದೆಹಲಿಯ ಏಮ್ಸ್​ಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಂದ ಬಳಿಕ ಇಂದು, ಶ್ಯಾಮ್​ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವೊಂದರ ಉದ್ಘಾಟನೆಗಾಗಿ ಆಗಮಿಸಿದ್ದ ಸಾಧ್ವಿ ಪ್ರಜ್ಞಾ ಸಿಂಗ್​ ಠಾಕೂರ್​ ಆರೋಗ್ಯ ಅಲ್ಲಿಯೇ ಹದಗೆಟ್ಟಿದೆ. ಎಚ್ಚರ ತಪ್ಪಿ ಬಿದ್ದಿದ್ದಾರೆ. ನಂತರ ಸಮಾರಂಭದಲ್ಲಿ ಭಾಗವಹಿಸಿದ್ದ ಜನರು ಸಾಧ್ವಿ ಪ್ರಜ್ಞಾ ಅವರನ್ನು ಖುರ್ಚಿಯ ಮೇಲೆ ಕೂರಿಸಿ, ಆರೈಕೆ ಮಾಡಿದ್ದಾರೆ. (ಏಜೆನ್ಸೀಸ್​)

    ಟ್ರಂಪ್​ ಸರ್ಕಾರದ ನಿರ್ಧಾರದಿಂದ ಭಾರತದ ಐಟಿ ಕಂಪನಿಗಳಿಗೆ ಹೊಡೆತ: ಹೆಚ್ಚಲಿದೆ ನಿರುದ್ಯೋಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts