More

    ಸಾಗರ: ಸುಸಜ್ಜಿತ ವಕೀಲರ ಭವನ ಉದ್ಘಾಟನೆ

    ಸಾಗರ: ಇಲ್ಲಿನ ನ್ಯಾಯಾಲಯ ಸಂಕೀರ್ಣದ ಹಿಂಭಾಗದಲ್ಲಿ 4.75 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಭವನವನ್ನು ಫೆ.11ರಂದು ಬೆಳಗ್ಗೆ 11.30ಕ್ಕೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಉದ್ಘಾಟಿಸುವರು ಎಂದು ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಎಚ್.ಆರ್.ಶ್ರೀಧರ್ ತಿಳಿಸಿದರು.

    ಅಧ್ಯಕ್ಷತೆಯನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಆರ್.ದೇವದಾಸ್ ವಹಿಸುವರು. ಸಚಿವರಾದ ಎಚ್.ಕೆ.ಪಾಟೀಲ್, ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪ, ಹೈಕೋರ್ಟ್‌ನ ಮಹಾ ವಿಲೇಖನಾಧಿಕಾರಿ ಕೆ.ಎಸ್.ಭರತ್‌ಕುಮಾರ್, ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಪಿ.ಪಿ.ಹೆಗ್ಡೆ ಅತಿಥಿಗಳಾಗಿ ಭಾಗವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಹಿಳಾ ವಕೀಲರಿಂದ ಹಾಡು, ಮಿಮಿಕ್ರಿ ಇತ್ಯಾದಿ ಮನರಂಜನಾ ಕಾರ್ಯಕ್ರಮವಿದೆ. ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಗ್ರಂಥಾಲಯ, ಮಹಿಳಾ ಕೊಠಡಿ, ವಕೀಲರ ಛೇಂಬರ್, ಸಮಾರಂಭ ನಡೆಸಲು ಅನುಕೂಲವಾಗುವಂತೆ ವಿಶಾಲ ಸಭಾಂಗಣ ಸೇರಿದಂತೆ ಎಲ್ಲ ಸೌಲಭ್ಯಗಳಿವೆ ಎಂದರು.
    ಸಂಘದ ಪ್ರಮುಖರಾದ ರಾಘವೇಂದ್ರ, ವಿ.ಶಂಕರ್, ಎಚ್.ಎನ್.ದಿವಾಕರ, ರಮೇಶ್, ಎಂ.ರಾಜಶೇಖರ, ಪರಮೇಶ್ವರ, ಕೆ.ಟಿ.ನ್ಯಾಮಯ್ಯ, ಸುದಿನ, ಸರೋಜಾ, ಭಾಗ್ಯಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts