More

    ಮುನಿಗಳ ಹತ್ಯೆಯಿಂದ ಅಧ್ಯಾತ್ಮ ಪರಂಪರೆಗೆ ಧಕ್ಕೆ

    ಚಿಕ್ಕೋಡಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಭಾರತದ ಅಧ್ಯಾತ್ಮ ಪರಂಪರೆಗೆ ಧಕ್ಕೆ ತಂದಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸಮೀಪದ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಆಶ್ರಮಕ್ಕೆ ಶನಿವಾರ ಭೇಟಿ ನೀಡಿ, ಆಶ್ರಮದ ಸದಸ್ಯರು ಹಾಗೂ ಪೂರ್ವಾಶ್ರಮದ ಸಹೋದರರಿಗೆ ಸಾಂತ್ವನ ಹೇಳಿ, ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಜೈನಮುನಿಗಳ ಹತ್ಯೆ ರಾಜಕೀಯ ತಿರುವು ಪಡೆದಿರುವುದು ಬೇಸರ ತರಿಸಿದೆ.

    ಈ ಹತ್ಯೆಯನ್ನು ಒಕ್ಕೊರಲಿನಿಂದ ಖಂಡಿಸುತ್ತೇನೆ. ಇಲ್ಲಿ ನೊಂದ ಮನಸ್ಸುಗಳಿಗೆ ಧೆರ್ಯ ಹೇಳಿ ಮುಂದೆ ಈ ರೀತಿ ಘಟನೆ ಆಗದಂತೆ ಎಲ್ಲರೂ ಸಾಮೂಹಿಕ ಪ್ರಯತ್ನ ಮಾಡಬೇಕಿದೆ. ಈ ಘಟನೆಯಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಧರ್ಮಗುರುಗಳಿಗೆ ತೊಂದರೆ ಆಗದ ರೀತಿ ಎಚ್ಚರ ವಹಿಸಬೇಕಿರುವುದು ನಾಗರಿಕರ ಕರ್ತವ್ಯ ಎಂದರು. ಡಾ.ಪದ್ಮರಾಜ ಪಾಟೀಲ, ಎಸ್.ಟಿ. ಮುನ್ನೋಳ್ಳಿ, ಶಂಕರಗೌಡ ಪಾಟೀಲ, ಉತ್ತಮ ಪಾಟೀಲ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts