ಹೈದರಾಬಾದ್: ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಶಿಬಿರದಿಂದ ಹೊರಗುಳಿದಿದ್ದಾರೆ. ಆಗಸ್ಟ್ 7 ರಿಂದಲೇ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಹಾಗೂ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಜಂಟಿಯಾಗಿ ಟೋಕಿಯೊ ಒಲಿಂಪಿಕ್ಸ್ ಸಿದ್ಧತೆಗಾಗಿ ಗೋಪಿಚಂದ್ ಅಕಾಡೆಮಿಯಲ್ಲಿ ಶಿಬಿರ ಆರಂಭಿಸಲಾಗಿದೆ. ಒಲಿಂಪಿಕ್ಸ್ನಲ್ಲಿ ಪದಕ ಭರವಸೆ ಹೊಂದಿರುವ ಕೇವಲ 8 ಮಂದಿಯನ್ನಷ್ಟೇ ಶಿಬಿರಕ್ಕೆ ಮಾಡಲಾಗಿದ್ದು, ಸೈನಾ ಪತಿ 2014ರ ಕಾಮನ್ವೆಲ್ತ್ ಗೇಮ್ಸ್ ಸ್ವರ್ಣ ಪದಕ ವಿಜೇತ ಪಿ.ಕಶ್ಯಪ್ ಅವರನ್ನು ಶಿಬಿರಕ್ಕೆ ಆಯ್ಕೆ ಮಾಡಲಾಗಿಲ್ಲ. ಇದರಿಂದ ಸಾಯ್-ಬಿಎಐ ನಿರ್ಧಾರದ ವಿರುದ್ಧ ಆಕ್ರೋಶಗೊಂಡಿರುವ ಸೈನಾ ಶಿಬಿರಕ್ಕೆ ಹಾಜರಾಗದೆ, ಪತಿ ಕಶ್ಯಪ್ ಜತೆಗೆ ಪ್ರತ್ಯೇಕವಾಗಿ ಅಭ್ಯಾಸ ಆರಂಭಿಸಿದ್ದಾರೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಮುಂದಾದ ಸುರೇಶ್ ರೈನಾ
ಪತಿಯನ್ನು ಶಿಬಿರಕ್ಕೆ ಆಯ್ಕೆ ಮಾಡಬೇಕೆಂದು ಸೈನಾ ಮಾಡಿದ್ದ ಮನವಿಗೆ ಸೂಕ್ತವಾಗಿ ಸ್ಪಂದನೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಅಭ್ಯಾಸ ಆರಂಭಿಸಿದ್ದಾರೆ. ಮತ್ತೊಂದೆಡೆ, ಕಶ್ಯಪ್ ಕೂಡ ಸಾಯ್ ಹಾಗೂ ಬಿಎಐಗೆ ಪತ್ರ ಬರೆದು ರಾಷ್ಟ್ರೀಯ ಶಿಬಿರದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ್ದಾರೆ. ಜತೆಗೆ ಹೊರಗೆ ಅಭ್ಯಾಸ ಮಾಡಿದರೂ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ಗೆ 700 ವಿಕೆಟ್ ಕಬಳಿಸುವಾಸೆ..!
ಶಿಬಿರಕ್ಕೆ ಆಯ್ಕೆಯಾಗಿರುವ 8 ಮಂದಿ ಪೈಕಿ ವಿಶ್ವ ಚಾಂಪಿಯನ್ ಪಿವಿ ಸಿಂಧು, ಡಬಲ್ಸ್ ತಜ್ಞೆ ಸಿಕ್ಕಿ ರೆಡ್ಡಿ, ಮಾಜಿ ವಿಶ್ವ ನಂ.1 ಕೆ.ಶ್ರೀಕಾಂತ್ ಹಾಗೂ ಸಾಯಿ ಪ್ರಣಿತ್ ಮಾತ್ರ ಶಿಬಿರಕ್ಕೆ ಹಾಜರಾಗುತ್ತಿದ್ದಾರೆ. ಉಳಿದಂತೆ, ಕನ್ನಡತಿ ಅಶ್ವಿನಿ ಪೊನ್ನಪ್ಪ ಬೆಂಗಳೂರಿನಲ್ಲೇ ಅಭ್ಯಾಸ ಮಾಡುತ್ತಿದ್ದರೆ, ಪುರುಷರ ಡಬಲ್ಸ್ ಜೋಡಿ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸಾಯ್ರಾಜ್ ಜೋಡಿ ಇನ್ನಷ್ಟೇ ಶಿಬಿರ ಕೂಡಿಕೊಳ್ಳಬೇಕಿದೆ. ಚಿರಾಗ್ ಮುಂಬೈನಲ್ಲಿ ಅಭ್ಯಾಸ ಮಾಡುತ್ತಿದ್ದರೆ, ಸಾತ್ವಿಕ್ ಆಂಧ್ರಪ್ರದೇಶದ ಅಮಲಾಪುರಂನಲ್ಲಿದ್ದಾರೆ.
PHOTOS: ಇಂದು ಅಂತಾರಾಷ್ಟ್ರೀಯ ಶ್ವಾನ ದಿನ, ಕ್ರಿಕೆಟಿಗರ ಶ್ವಾನ ಪ್ರೀತಿ…!