ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕ್ರೀಡಾಪಟುಗಳು ದೆಹಲಿಯಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೋಮವಾರದಿಂದ ತಮ್ಮ ಕೆಲಸಕ್ಕೆ ಮರಳಲಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ರೈಲ್ವೆಯಲ್ಲಿ ಈ ಮೂವರು ಕಾರ್ಯ ನಿರ್ವಹಿಸುತ್ತಿದ್ದು ತಮ್ಮ ಕೆಲಸಕ್ಕೆ ವರದಿ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೂ ಕೆಲ ಹೊತ್ತಿನ ಮುನ್ನ ಕುಸ್ತಿಪಟುಗಳು ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ವದಂತಿ ಜೋರಾಗಿ ಹಬ್ಬಿತ್ತು.
ಇದನ್ನೂ ಓದಿ: ಅಪಾರ್ಟ್ಮೆಂಟ್ಗಾಗಿ ಕೆರೆ ಮಧ್ಯೆ ರಸ್ತೆ! ಈ ಐಡಿಯಾ ಕೊಟ್ಟವರು ಯಾರು? ಡಿಕೆಶಿ ಪ್ರಶ್ನೆ
ಕೆಲಸಕ್ಕೆ ವಾಪಸ್
ಈ ಕುರಿತು ಟ್ವೀಟ್ ಮಾಡಿರುವ ಸಾಕ್ಷಿ ಮಲಿಕ್ ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟದಿಂದ ನಾವು ಹಿಂದೆ ಸರಿಯುವ ಮಾತಿಲ್ಲ. ಪ್ರತಿಭಟನೆಯ ಜೊತೆಗೆ ನಾನು ರೈಲ್ವೆಯಲ್ಲಿನ ನನ್ನ ಕೆಲಸಕ್ಕೆ ಮರಳುತ್ತಿದ್ದೇನೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ.
ಕುಸ್ತಿಪಟು ಬಜರಂಗ್ ಪೂನಿಯಾ ಟ್ವೀಟ್ ಮಾಡಿ ಪ್ರತಿಭಟನೆಯಿಂದ ನಾವು ಹಿಂಪಡಯುತ್ತಿದ್ದೇವೆ ಎಂಬ ವದಂತಿಗಳಿಗೆ ಕಿವಿಗೊಡಬೇಡಿ. ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ FIR ಹಿಂಪಡೆಯುತ್ತಾರೆ ಎಂಬ ವಿಚಾರವು ಸತ್ಯಕ್ಕೆ ದೂರವಾದ ಮಾತು. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದ್ಧಾರೆ.