ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಸಿನಿಮಾ ಕೆಲಸಗಳು ಸ್ಥಗಿತವಾದ ಬೆನ್ನಲ್ಲೇ ಚಿತ್ರೋದ್ಯಮವನ್ನೇ ನಂಬಿ ಬದುಕುತ್ತಿದ್ದ ಕೂಲಿಕಾರ್ಮಿಕರು ಅತಂತ್ರರಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಸಾಕಷ್ಟು ಸಂಘಸಂಸ್ಥೆಗಳು ನೆರವಿಗೆ ನಿಂತಿವೆ. ವೈಯಕ್ತಿಕವಾಗಿ ಮುಂದೆ ಬಂದ ಕಲಾವಿದರು, ಸಿನಿಮಾ ಕಾರ್ಮಿಕರಿಗೆ ನೆರವು ನೀಡುತ್ತಿದ್ದಾರೆ. ಹಾಗೆಯೇ ಇದೀಗ ‘ಸಲಗ’ ಚಿತ್ರತಂಡವೂ ಡಾ. ರಾಜ್ ಜಯಂತಿ ನಿಮಿತ್ತ ಅವಶ್ಯಕ ಸಾಮಾಗ್ರಿಗಳನ್ನು ವಿತರಣೆ ಮಾಡಿದೆ. ಚಿತ್ರದ ನಾಯಕ ಮತ್ತು ನಿರ್ದೇಶಕ ದುನಿಯಾ ವಿಜಯ್, ಡಾಲಿ ಧನಂಜಯ್, ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಸೇರಿ ನೂರಾರು ಕುಟುಂಬಗಳಿಗೆ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಿದ್ದಾರೆ.