ಒಂಬತ್ತನೇ ದಿನ ಪೂರೈಸಿದ ಧರಣಿ

blank

ಜಗಳೂರು: ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲೂಕು ಘಟಕ ತಾಲೂಕು ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸೋಮವಾರ ಒಂಬತ್ತನೇ ದಿನ ಪೂರೈಸಿತು.

blank

ಸಂಘದ ತಾಲೂಕು ಅಧ್ಯಕ್ಷ ಅರುಣ್ ಮಾತನಾಡಿ, ಕೆಲಸಕ್ಕೆ ರಜೆ ಹಾಕಿ ಕಳೆದ ಒಂಬತ್ತು ದಿನಗಳಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಸರ್ಕಾರ ಪ್ರತಿಭಟನೆಗೆ ಸ್ಪಂದಿಸುತ್ತಿಲ್ಲ. ಮೂಲಸೌಲಭ್ಯಗಳ ಜತೆ ಬೇಡಿಕೆಗಳನ್ನು ಈಡೇರಿಸಲು ಸಚಿವರು ಮುಂದಾಗಬೇಕು ಎಂದು ಮನವಿ ಮಾಡಿದರು.

ಸಂಘದ ಕಾರ್ಯದರ್ಶಿ ಮಹೇಶ್, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ್, ಖಜಾಂಚಿ ಮಧುಸೂದನ್, ಸೊಕ್ಕೆ ದುರುಗೇಶ್, ಆರ್.ಐ. ಧನಂಜಯ್, ಕೀರ್ತಿಕುಮಾರ್, ಆಡಳಿತಾಧಿಕಾರಿಗಳಾದ ಪ್ರದೀಪ್ ನಾಯಕ, ದಿಲೀಪ್​ಕುಮಾರ್, ಬಸಪ್ಪಗೌಡರ್, ಬಸವರಾಜ್, ಸರ್ವಶ್ರೀ, ಕೀರ್ತಿಕುಮಾರಿ, ನೇತ್ರಾವತಿ, ಶ್ವೇತಾ, ದಸಂಸ ಮುಖಂಡ ಗೌರಿಪುರ ಸತ್ಯಮೂರ್ತಿ ಸೇರಿ ಮತ್ತಿತರರಿದ್ದರು.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…