ಭೋಪಾಲ್: ದೇಶದಲ್ಲಿ ಕರೊನಾ ರುದ್ರತಾಂಡವ ಆಡುತ್ತಿದೆ. ಪ್ರತಿದಿನ ಸಾವಿರಾರು ಜನರು ಸಾವನ್ನಪ್ಪುತ್ತಿದ್ದರೆ ಲಕ್ಷಾಂತರ ಜನರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಬಹುತೇಕ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಭರ್ತಿಯಾಗಿದೆ. ಹೀಗಿರುವಾಗ ನಗರಕ್ಕೆ ಬಂದರೆ ಕರೊನಾ ಬಂದಿದೆ ಎನ್ನುತ್ತಾರೆ ಎಂದ ಭಯಪಟ್ಟ ಗ್ರಾಮದ ರೋಗಿಗಳು ಮರದಡಿಯಲ್ಲೇ ಚಿಕಿತ್ಸೆ ಪಡೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಈ ರೀತಿಯ ಘಟನೆ ನಡೆದಿದೆ. ಅಲ್ಲಿನ ಹಳ್ಳಿಯೊಂದರಲ್ಲಿ ಅನೇಕರು ತಂಡಿ ಜ್ವರದಿಂದ ಬಳಲುತ್ತಿದ್ದಾರೆ. ಆದರೆ ಜಿಲ್ಲಾಸ್ಪತ್ರೆಗೆ ತೆರಳಿದರೆ ಕರೊನಾ ಪರೀಕ್ಷೆ ಮಾಡಿಸಲು ಹೇಳುತ್ತಾರೆ ಎನ್ನುವ ಭಯದಿಂದ ಅವರು ಗ್ರಾಮದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ಆಸ್ಪತ್ರೆಯ ಬೆಡ್ಗಳು ಪೂರ್ಣವಾಗಿ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಅಲ್ಲೇ ಹತ್ತಿರದಲ್ಲಿರುವ ಮರಗಳ ಕೆಳಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮರದ ಕೆಳಗೆ ಹಾಸಿಗೆ ಹಾಸಿ, ಮರದ ಕೊಂಬೆಗಳಿಗೆ ಸಲೈನ್ ಬಾಟೆಲ್ಗಳನ್ನು ಕಟ್ಟಿ ರೋಗಿಗಳಿಗೆ ನೀಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ರೀತಿಯ ಚಿಕಿತ್ಸೆ ನೀಡುತ್ತಿರುವ ವೈದ್ಯರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಹಾಗೆಯೇ ತಂಡಿ, ಜ್ವರ, ತಲೆನೋವಿನಂತಹ ರೋಗ ಲಕ್ಷಣವಿರುವವರು ದಯಮಾಡಿ ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ. (ಏಜೆನ್ಸೀಸ್)
ಮತ್ತೆ ಫೀಲ್ಡಿಗಿಳಿದ ನಟಿ ರಾಗಿಣಿ; ಸ್ಮಶಾನ ಸಿಬ್ಬಂದಿಗೆ ಆಹಾರ ಸಾಮಾಗ್ರಿ ವಿತರಣೆ
ಬೆಳಗ್ಗೆ ಅಪ್ಪ, ರಾತ್ರಿ ಮಗ.. ಒಂದೇ ದಿನ ಕುಟುಂಬದ ಇಬ್ಬರನ್ನು ಬಲಿ ಪಡೆದ ಕರೊನಾ!