ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಇದೀಗ ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿರುವ ಸಲ್ಮಾನ್ ಖಾನ್ ಪರವಾನಗಿ ನೀಡುವಂತೆ ಮನವಿ ಮಾಡಿದ್ದಾರೆ.
ಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಬಳಿಕ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಕಳೆದ ತಿಂಗಳು ಮುಂಬೈನ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ವಾಯುವಿಹಾರದ ವೇಳೆ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಬ್ಬರಿಗೂ ಜೀವ ಬೆದರಿಕೆ ಹಾಕಿ ಪತ್ರ ಬರೆಯಲಾಗಿತ್ತು.
ಈ ಬಳಿಕ ಪೊಲೀಸರು ತನಿಖೆ ಕೂಡ ಆರಂಭಿಸಿದ್ದರು, ಸಿಧು ಮೂಸೆವಾಲಾ ಪ್ರಕರಣದಲ್ಲಿ ಆರೋಪಿಯಾಗಿರುವ ಲಾರೆನ್ಸ್ ಬಿಷ್ಣೋಯಿ ವಿಚಾರಣೆ ಮಾಡಲಾಗುತ್ತಿದೆ. ಸದ್ಯ ಸಲ್ಮಾನ್ ಅವರ ಹತ್ಯೆಗೆ ಸಂಚು ರೂಪಿಸಿದ್ದು ನಿಜವೆಂದು ಕೂಡ ಬಿಷ್ಣೊಯಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಎಲ್ಲಾ ಬೆಳವಣಿಗೆಗಳ ಬಳಿಕ ತನಗೆ ಪ್ರಾಣ ಬೆದರಿಕೆ ಇದೆ ಎಂದು ಸಲ್ಮಾನ್ ಖಾನ್ ಇದೀಗ ಶಸ್ತ್ರಾಸ್ತ್ರಕ್ಕೆ ಪರವಾನಗಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದಾರೆ. (ಏಜೆನ್ಸೀಸ್)
ಇನ್ನೂ 4 ಕೋಟಿ ಜನರು ಪಡೆದಿಲ್ಲ ಒಂದೂ ಲಸಿಕೆ: ಆರೋಗ್ಯ ಸಚಿವಾಲಯದಿಂದ ಮಾಹಿತಿ
ಊಹಿಸಿಕೊಳ್ಳಲೂ ಅಸಾಧ್ಯ, 2 ವರ್ಷಗಳ ಬಳಿಕ ಪತ್ತೆಯಾದ ಮಹಿಳೆಯ ಮೃತದೇಹದ ಮರಣೋತ್ತರ ವರದಿಯಲ್ಲಿತ್ತು ಕರಾಳ ಸತ್ಯ!