More

    ಜೀವ ಬೆದರಿಕೆ: ಶಸ್ತ್ರಾಸ್ತ್ರಕ್ಕೆ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ ಬಾಲಿವುಡ್​ ನಟ ಸಲ್ಮಾನ್ ಖಾನ್​

    ಮುಂಬೈ: ಬಾಲಿವುಡ್​ ನಟ ಸಲ್ಮಾನ್ ಖಾನ್​ ಅವರು ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಸಲ್ಮಾನ್​ ಖಾನ್​ಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಇದೀಗ ಉನ್ನತ ಪೊಲೀಸ್​ ಅಧಿಕಾರಿಗಳನ್ನು ಭೇಟಿಯಾಗಿರುವ ಸಲ್ಮಾನ್​ ಖಾನ್​ ಪರವಾನಗಿ ನೀಡುವಂತೆ ಮನವಿ ಮಾಡಿದ್ದಾರೆ.

    ಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಬಳಿಕ ಸಲ್ಮಾನ್​ ಖಾನ್​ಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಕಳೆದ ತಿಂಗಳು ಮುಂಬೈನ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ವಾಯುವಿಹಾರದ ವೇಳೆ ಸಲ್ಮಾನ್​ ಖಾನ್ ಮತ್ತು ಅವರ ತಂದೆ ಸಲೀಂ ಖಾನ್​ ಅವರಿಬ್ಬರಿಗೂ ಜೀವ ಬೆದರಿಕೆ ಹಾಕಿ ಪತ್ರ ಬರೆಯಲಾಗಿತ್ತು.

    ಈ ಬಳಿಕ ಪೊಲೀಸರು ತನಿಖೆ ಕೂಡ ಆರಂಭಿಸಿದ್ದರು, ಸಿಧು ಮೂಸೆವಾಲಾ ಪ್ರಕರಣದಲ್ಲಿ ಆರೋಪಿಯಾಗಿರುವ ಲಾರೆನ್ಸ್​ ಬಿಷ್ಣೋಯಿ ವಿಚಾರಣೆ ಮಾಡಲಾಗುತ್ತಿದೆ. ಸದ್ಯ ಸಲ್ಮಾನ್​ ಅವರ ಹತ್ಯೆಗೆ ಸಂಚು ರೂಪಿಸಿದ್ದು ನಿಜವೆಂದು ಕೂಡ ಬಿಷ್ಣೊಯಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

    ಈ ಎಲ್ಲಾ ಬೆಳವಣಿಗೆಗಳ ಬಳಿಕ ತನಗೆ ಪ್ರಾಣ ಬೆದರಿಕೆ ಇದೆ ಎಂದು ಸಲ್ಮಾನ್​ ಖಾನ್ ಇದೀಗ ಶಸ್ತ್ರಾಸ್ತ್ರಕ್ಕೆ ಪರವಾನಗಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದಾರೆ. (ಏಜೆನ್ಸೀಸ್​)

    ಇನ್ನೂ 4 ಕೋಟಿ ಜನರು ಪಡೆದಿಲ್ಲ ಒಂದೂ ಲಸಿಕೆ: ಆರೋಗ್ಯ ಸಚಿವಾಲಯದಿಂದ ಮಾಹಿತಿ

    ಊಹಿಸಿಕೊಳ್ಳಲೂ ಅಸಾಧ್ಯ, 2 ವರ್ಷಗಳ ಬಳಿಕ ಪತ್ತೆಯಾದ ಮಹಿಳೆಯ ಮೃತದೇಹದ ಮರಣೋತ್ತರ ವರದಿಯಲ್ಲಿತ್ತು ಕರಾಳ ಸತ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts