ಬೆಂಗಳೂರು: ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಹಾರೈಸಿದರು. ನಾಡಿನಲ್ಲಿ ಮಳೆ, ಬೆಳೆ ಆಗಿ ಸಮೃದ್ಧವಾಗಿ ಆಡಳಿತ ನಡೆಸುವಂತೆ ಆಗಲಿ ಎಂದು ತಿಮ್ಮಕ್ಕ ಶುಭ ಹಾರಿಸಿದರು.
ಇದನ್ನೂ ಓದಿ: 2 ವರ್ಷ ಕಳೆಯಲಿ, ಮತ್ತೆ 8 ವರ್ಷ ಡಿಕೆಶಿ ಸಿಎಂ; ಭವಿಷ್ಯ ನುಡಿದ ಜ್ಯೋತಿಷಿ!
ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯನವರು ತಿಮ್ಮಕ್ಕ ಅವರಿಗೆ ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಾಕು ಮಗ ಬಳ್ಳೂರು ಉಮೇಶ್ ಇದ್ದರು.(ಏಜೆನ್ಸೀಸ್)